ರಾಷ್ಟ್ರಪತಿ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ನಿಶ್ಚಿತಾರ್ಥ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜು

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಭಾನುವಾರ (ಜು.4) ಅವರು ಅಖಿಲಾ ಎಂಬುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ರಾಷ್ಟ್ರಪತಿ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ನಿಶ್ಚಿತಾರ್ಥ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜು

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಭಾನುವಾರ (ಜು.4) ಅವರು ಅಖಿಲಾ ಎಂಬುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಕೊರೋನಾ ವೈರಸ್​ ಲಾಕ್​ಡೌನ್​ ನಿಯಮಾವಳಿ ಅನುಸಾರ ಕೆಲವೇ ಕೆಲವು ಮಂದಿಯ ಸಮ್ಮುಖದಲ್ಲಿ ಈ ನಿಶ್ಚಿತಾರ್ಥ ನೆರವೇರಿದೆ. ಕುಟುಂಬದವರು, ಆಪ್ತರು, ಸ್ನೇಹಿತರು ಸೇರಿ
ಕೆಲವರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಆಗಸ್ಟ್​ 15ರಂದು ಮಂಸೋರೆ-ಅಖಿಲಾ ಬಾಳಬಂಧನಕ್ಕೆ ಒಳಗಾಗಲಿದ್ದಾರೆ.

‘ಹರಿವು’, ‘ನಾತಿಚರಾಮಿ’ ಮತ್ತು ‘ಆಕ್ಟ್​ 1978’ ಚಿತ್ರಗಳಿಗೆ ನಿರ್ದೇಶನ ಮಾಡಿದವರು ಮಂಸೋರೆ. ಈ ಪೈಕಿ ಹರಿವು ಮತ್ತು ನಾತಿಚರಾಮಿ ಚಿತ್ರಗಳಲ್ಲಿ ಸಂಚಾರಿ ವಿಜಯ್​ ಅವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ಈ ಎರಡೂ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಒಲಿದು ಬಂದಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com