ಬೆಂಗಳೂರು: ಸ್ಯಾಂಡಲ್ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚೋದನೆಯಿಂದಾಗಿ ಅವರ ಹಿಂಬಾಲಕರು, ಅವರ ರೌಡಿಗಳು ನನಗೆ ಮೊಬೈಲ್ ಕರೆ ಹಾಗೂ ವಾಟ್ಸ್ ಆ್ಯಪ್ ಮೂಲಕ ಬೆದರಿಕೆ ಹಾಕುತ್ತಿದ್ದಾರೆ ಎಂದು ಪತ್ರಕರ್ತ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದಾರೆ.
ಇಂದು ಮಾಧ್ಯಗಳ ಜೊತೆ ಮಾತನಾಡಿದ ಇಂದ್ರಜಿತ್ ಲಂಕೇಶ್, ಪ್ರಕರಣದ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ಕಾನೂನಿನ ಮೂಲಕ ನಾನು ಹೋರಾಡುತ್ತೇನೆ. ದರ್ಶನ್ ಪ್ರಚೋದನೆ ಬಳಿಕ ಅವರ ಹಿಂಬಾಲಕರು, ಅವರು ರೌಡಿಗಳು ನನಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದರು.
ಇನ್ನು ಕಳೆದ 24 ಗಂಟೆಯಲ್ಲಿ ಪ್ರತಿ 30 ಸೆಕೆಂಡ್ ಗೆ ಒಂದು ಕರೆ ಬರುತ್ತಿದೆ. ಅಶ್ಲೀಲ ಪದಗಳನ್ನು ಬಳಸಿ ಸಂದೇಶ ಹಾಗೂ ಚಿತ್ರಗಳನ್ನು ಕಳುಹಿಸುತ್ತಿದ್ದಾರೆ ಎಂದರು.
ಮೈಸೂರಿನ ಹೋಟೆಲ್ ಸಿಬ್ಬಂದಿ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ಇಂದ್ರಜಿತ್ ಲಂಕೇಶ್ ಆರೋಪಿಸಿದ್ದರು. ಈ ವಿಚಾರ ಇಬ್ಬರ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.
Advertisement