ಚೆನ್ನೈ: ತಮಿಳು ಚಿತ್ರರಂಗದ ಸ್ಟಾರ್ ಹೀರೋ ಅಜಿತ್ ಅವರ ಮನೆಯಲ್ಲಿ ಬಾಂಬ್ ಇರಿಸಿರುವುದಾಗಿ ಅಪರಿಚಿತ ವ್ಯಕ್ತಿಗಳು ದೂರವಾಣಿ ಕರೆ ಮಾಡಿದ್ದರಿಂದ ಅವರ ನಿವಾಸದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಹೀರೋ ಅಜಿತ್ ಕುಟುಂಬ ಚೆನ್ನೈನ ತಿರುವನ್ಮಿಯೂರ್ ನಲ್ಲಿ ವಾಸಿಸುತ್ತಿದೆ. ಆದರೆ, ಅವರ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ
ಅಪರಿಚಿತ ವ್ಯಕ್ತಿಗಳು ಸೋಮವಾರ ಪೊಲೀಸ್ ಕಂಟ್ರೋಲ್ ರೂಮ್ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ. ನಂತರ ಪೊಲೀಸರು ಮನೆಗೆ ಧಾವಿಸಿ ಪರಿಶೀಲಿಸಿದಾಗ ಇದೊಂದು ಹುಸಿ ಕರೆ ಎಂಬುದು ದೃಢಪಟ್ಟಿದೆ.
ಅಜಿತ್ ಕುಮಾರ್ ಮನೆಗೆ ಬಾಂಬ್ ಇಡಲಾಗಿದೆ ಎಂದು ಹುಸಿ ಕರೆ ಬರುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಕೂಡ ಇದೇ ರೀತಿಯ ಘಟನೆ ನಡೆದಿತ್ತು. ಅದಕ್ಕೂ ಮುನ್ನ 2014ರಲ್ಲಿಯೂ ಬಾಂಬ್ ಬೆದರಿಕೆ ಕರೆಬಂದಿರುವ ಬಗ್ಗೆ ಪೊಲೀಸ್ ಠಾಣೆಗೆ ಕರೆ ಮಾಡಿ ಅಜಿತ್ ಮನೆಯ ಸಿಬ್ಬಂದಿ ಮಾಹಿತಿ ನೀಡಿದ್ದರು. ಆಗಲೂ ಅದು ಹುಸಿ ಬಾಂಬ್ ಕರೆ ಎಂಬುದು ಸಾಬೀತಾಗಿತ್ತು.
ಪದೇ ಪದೇ ಅಜಿತ್ ನಿವಾಸದ ಬರುತ್ತಿರುವ ಹುಸಿ ಕರೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 'ನೇರ್ಕೊಂಡ ಪಾರ್ವೈ' ಚಿತ್ರದ ಬಳಿಕ ನಟ ಅಜಿತ್ 'ವಾಲಿಮೈ' ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.
Advertisement