ಖಾಸಗಿ ವಾಹಿನಿ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಹಾಡಿನ ರಿಯಾಲಿಟಿ ಶೋನಲ್ಲಿ ಜನಮೆಚ್ಚುಗೆಗೆ ಪಾತ್ರವಾಗಿದ್ದ ಪೊಲೀಸ್ ಅಧಿಕಾರಿ ಸುಬ್ರಹ್ಮಣ್ಯ ಪತ್ನಿ ಜ್ಯೋತಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ.
ಜ್ಯೋತಿ ಕಳೆದ ಒಂದು ವಾರದಿಂದ ಕೊರೋನಾ ಸೋಂಕಿನಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಹಿನ್ನಲೆಯಲ್ಲಿ ಆಸ್ಪತ್ರೆಗಾಗಿ ಅಲೆದಾಡಿದ್ದರು. ಆದರೆ ಸೂಕ್ತ ಸಮಯದಲ್ಲಿ ವೆಂಟಿಲೇಟರ್ ಸಿಗದೇ ಮೃತಪಟ್ಟಿದ್ದಾರೆ.
ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಪೋಲೀಸ ಅಧಿಕಾರಿ ಪತ್ನಿ ನಿನ್ನೆ (ಮೇ 10) ಪ್ರಾಣಬಿಟ್ಟಿದ್ದಾರೆ.
ಕೋಲಾರ ಮೂಲದ ಸುಬ್ರಹ್ಮಣ್ಯ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
Advertisement