ಬೆಂಗಳೂರು: ಕೊರೋನಾ ಎರಡನೇ ಅಲೆಯಿಂದಾಗಿ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಾಗಿ ಸಿನಿಮಾ ಕಾರ್ಮಿಕರು ಕೆಲಸ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ನಟ-ನಟಿಯರು ಸಿಬ್ಬಂದಿಗೆ ನೆರವು ನೀಡುತ್ತಿದ್ದಾರೆ.
ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಶಾಸ್ತ್ರೀ ಚಿತ್ರದಲ್ಲಿ ನಟಿಸಿದ್ದ ಮಾನ್ಯ ಸದ್ಯ ಮದುವೆಯಾಗಿ ಅಮೆರಿಕಾದಲ್ಲಿ ನೆಲೆಸಿದ್ದಾರೆ. ಅಲ್ಲಿ ನೆಲೆಸಿದ್ದರು ಸ್ಯಾಂಡಲ್ವುಡ್ ಮಂದಿಗೆ ನೆರವಾಗಿದ್ದಾರೆ.
ಹೌದು, ಉಪೇಂದ್ರ ಅವರು ಸಿಬ್ಬಂದಿಗಾಗಿ ಆರಂಭಿಸಿರುವ ನೆರವಿನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದಕ್ಕಾಗಿ ಹಲವು ನಟ-ನಟಿಯರು ತಮ್ಮ ಕೈಲಾದಷ್ಟು ದೇಣಿಗೆಯನ್ನು ನೀಡುತ್ತಿದ್ದಾರೆ. ಇನ್ನು ಮಾನ್ಯ ಅವರು ಸಂಕಷ್ಟದಲ್ಲಿರುವ ಸಿಬ್ಬಂದಿಗಾಗಿ ಸಹಾಯ ಮಾಡಲು ಒಂದು ಲಕ್ಷ ರುಪಾಯಿ ಕಳಿಸಿದ್ದಾರೆ.
ಈ ವಿಚಾರವನ್ನು ಉಪೇಂದ್ರ ಅವರು ತಮ್ಮ ಟ್ವೀಟರ್ ನಲ್ಲಿ ಶೇರ್ ಮಾಡಿದ್ದು ಮ್ಯಾನ ಅವರು 1 ಲಕ್ಷ ರುಪಾಯಿ ಕಳಿಸಿದ್ದು ಈ ಹಣದಿಂದ ದಿನಸಿ ಕಿಟ್ ಖರೀದಿಸಿ ಸದ್ಯದಲ್ಲೇ ವಿತರಿಸಿ ಅದರ ವಿವರ ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Advertisement