ಕೋವಿಡ್-19: ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ನಟ ರಜನೀಕಾಂತ್ 50 ಲಕ್ಷ ರೂ. ದೇಣಿಗೆ!

 ಕೋವಿಡ್-19 ಎರಡನೇ ಅಲೆ ವಿರುದ್ಧದ ಹೋರಾಟಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಸೂಪರ್ ಸ್ಟಾರ್ ರಜನಿಕಾಂತ್ 50 ಲಕ್ಷ ರೂ.ದೇಣಿಗೆಯನ್ನು ನೀಡಿದ್ದಾರೆ. 
ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗೆ 50 ಲಕ್ಷ ರೂ. ಚೆಕ್  ನೀಡಿದ ಸೂಪರ್ ಸ್ಟಾರ್ ರಜನಿಕಾಂತ್
ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗೆ 50 ಲಕ್ಷ ರೂ. ಚೆಕ್ ನೀಡಿದ ಸೂಪರ್ ಸ್ಟಾರ್ ರಜನಿಕಾಂತ್

ಚೆನ್ನೈ: ಕೋವಿಡ್-19 ಎರಡನೇ ಅಲೆ ವಿರುದ್ಧದ ಹೋರಾಟಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಸೂಪರ್ ಸ್ಟಾರ್ ರಜನಿಕಾಂತ್ 50 ಲಕ್ಷ ರೂ.ದೇಣಿಗೆಯನ್ನು ನೀಡಿದ್ದಾರೆ. 

ಸೋಮವಾರ ಸಚಿವಾಲಯದಲ್ಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಭೇಟಿಯಾದ ರಜನಿಕಾಂತ್ 50 ಲಕ್ಷ ರೂ.  ದೇಣಿಗೆಯ 
ಚೆಕ್ ನ್ನು ಹಸ್ತಾಂತರಿಸಿದರು.ಕೋವಿಡ್-19 ನಿಯಂತ್ರಣ ನಿಟ್ಟಿನಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಜನರು ಪಾಲಿಸುವಂತೆ  ಮನವಿ ಮಾಡಿದರು.

ಕೋವಿಡ್-19 ವಿರುದ್ಧದ ಹೋರಾಟಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಸ್ಟಾಲಿನ್ ಜನರಲ್ಲಿ ಮನವಿ ಮಾಡಿದ ನಂತರ  ರಜನಿಕಾಂತ್ ದೇಣಿಗೆ ನೀಡಿದ್ದಾರೆ.

ತಮಿಳುನಾಡಿನಲ್ಲಿ ನಿನ್ನೆ 12,450 ಹೊಸ ಕೋವಿಡ್-19 ಪ್ರಕರಣಗಳು, 20,905 ಗುಣಮುಖ ಹಾಗೂ 303 ಸಾವಿನ ಪ್ರಕರಣಗಳು ವರದಿಯಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com