ಸ್ಯಾಂಡಲ್ವುಡ್: ಅಂತೂ ಇಂತೂ ಒಳ್ಳೆ ಬುದ್ಧಿ ಬಂತಾ? ಫ್ಯಾನ್ಸ್ ವಾರ್ ಗೆ ಫುಲ್ ಸ್ಟಾಪ್ ಇಟ್ಟ ಫ್ಯಾನ್ಸ್!

ಗಂಧದಗುಡಿ ಅಂಗಳದಲ್ಲೀಗ ಹೊಸ ಬೆಳವಣಿಗೆಯೊಂದು ನಡೆಯುತ್ತಿದೆ. ಈ ಬೆಳವಣಿಗೆ ಇಡೀ ಕನ್ನಡ ಸಿನಿಪ್ರಿಯರಿಗೆ ಖಂಡಿತ ಖುಷಿ ಕೊಡುತ್ತೆ. ಅಂತಹ ಬೆಳವಣಿಗೆ ಏನು ಅಂದ್ರೆ, ಕನ್ನಡ ಚಿತ್ರರಂಗದ ಅಭಿಮಾನಿದೇವರುಗಳ ಬಳಗ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದಾರೆ.
ಕನ್ನಡ ಚಿತ್ರರಂಗದ ನಟರು
ಕನ್ನಡ ಚಿತ್ರರಂಗದ ನಟರು

ಬೆಂಗಳೂರು: ಗಂಧದಗುಡಿ ಅಂಗಳದಲ್ಲೀಗ ಹೊಸ ಬೆಳವಣಿಗೆಯೊಂದು ನಡೆಯುತ್ತಿದೆ. ಈ ಬೆಳವಣಿಗೆ ಇಡೀ ಕನ್ನಡ ಸಿನಿಪ್ರಿಯರಿಗೆ ಖಂಡಿತ ಖುಷಿ ಕೊಡುತ್ತೆ. ಅಂತಹ ಬೆಳವಣಿಗೆ ಏನು ಅಂದ್ರೆ, ಕನ್ನಡ ಚಿತ್ರರಂಗದ ಅಭಿಮಾನಿದೇವರುಗಳ ಬಳಗ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದಾರೆ.

ಹೌದು.. ಕನ್ನಡದ ರಾಜರತ್ನ..ಯುವರತ್ನ.. ಪವರ್ ಸ್ಟಾರ್ ಪುನೀತ್ ಹಠಾತ್ ಸಾವು ಎಲ್ಲರನ್ನು ದಿಗ್ರ್ಬಮೆಗೆ ತಳ್ಳಿದೆ. ಇರೋ ನಾಲ್ಕೈದು ದಿನ ಎಲ್ಲರು ಖುಷಿಯಿಂದ ಒಗ್ಗಟ್ಟಿನಿಂದ ಇರೋಣ. ಈ ಸ್ಟಾರ್ ವಾರ್, ಫ್ಯಾನ್ ವಾರ್ ಎಲ್ಲ ಪಕ್ಕಕ್ಕಿಟ್ಟು. ಒಗ್ಗಟ್ಟಿನಿಂದ ಜೀವಿಸೋಣ ಅನ್ನೋ ಸಂದೇಶವನ್ನು ಅಭಿಮಾನಿಗಳು ಸಾರಿ ಸಾರಿ ಹೇಳ್ತಿದ್ದಾರೆ. ನಮ್ಮ ಕನ್ನಡ ಇಂಡಸ್ಟ್ರೀಯ ಎಲ್ಲಾ ಸ್ಟಾರ್ಸ್ ಅಭಿಮಾನಿಗಳು ಒಂದಾಗಿದ್ದಾರೆ. ಸದಾ ಸ್ಟಾರ್ಸ್ ವಾರ್ ಫ್ಯಾನ್ ವಾರ್ ಅಂತಾ ತೊಳೇರಿಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಕಿತ್ತಾಟ ನಡೆಸ್ತಿದ್ದ ಅಭಿಮಾನಿ ದೇವರುಗಳು ಈಗ ನಾವೆಲ್ಲ ಒಂದೇ ಅನ್ನೋ ಮಂತ್ರ ಜಪಿಸ್ತಿದ್ದಾರೆ. ಕನ್ನಡದ ಹಿರಿಯ ನಟ. ನವರಸ ನಾಯಕ ಜಗ್ಗೇಶ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. 

ಎಲ್ಲರ ಸ್ಟಾರ್ಸ್‌ ಒಂದಾಗಿರುವ ಫೋಟೋವನ್ನು ಹಂಚಿಕೊಂಡು, ಈಭಾವ ನನ್ನಕಣ್ಣಲ್ಲಿ ಆನಂದಭಾಷ್ಪ ತರಿಸಿತು! ಮಾನ್ಯರೆ ನಾವೆಲ್ಲಾ ಶಾರದೆಯ ಮಕ್ಕಳು ಚಿತ್ರರಂಗ ನಮ್ಮ ಮನೆ! ಕನ್ನಡಿಗರು ನಮ್ಮ ಬಂಧುಗಳು! ನಮ್ಮ ಈ ಒಗ್ಗಟ್ಟು ರಾಜಣ್ಣನ ಕಾಲದಲ್ಲಿ ಇತ್ತು! ಮತ್ತೆ ಬರೋದಿಲ್ಲವೆ ಎಂಬ ಕೊರಗು ಕಾಡುತ್ತಿತ್ತು! ಈಗ ಇದನ್ನ ನೋಡಿ ಹಾಲುಜೇನು ಸವಿದಂತೆ ಆಯಿತು!ಈ ಒಗ್ಗಟ್ಟಿನ ಮಂತ್ರ ಯಾವ ಅಡೆತಡೆ ಇಲ್ಲದೆ ಮುಂದುವರಿಯಲಿ ಅಂತ ಟ್ವೀಟ್ ಮಾಡಿದ್ದಾರೆ. ಅಭಿಮಾನಿಗಳ ಈ ನಡೆಗೆ ಜಗ್ಗೇಶ್ ಸಾಥ್ ಕೊಟ್ಟಿದ್ದಾರೆ.  ಅಪ್ಪು, ಕಿಚ್ಚ, ದಚ್ಚು ಗಣಿ, ಶಿವಣ್ಣ ಹೀಗೆ ಕನ್ನಡದ ಎಲ್ಲಾ ಸ್ಟಾರ್ಸ್‌ ಫ್ಯಾನ್ಸ್, ಫ್ಯಾನ್ಸ್ ವಾರ್ ಬೇಡ್ವೇ ಬೇಡ ಅನ್ನೋ ನಿರ್ಧಾರಕ್ಕೆ ಬಂದಿದ್ದಾರೆ. ಜೇನಿನಗೂಡು ನಾವೆಲ್ಲ ಹೀಗೆ ಇರೋಣಾ ಅಂತಾ ಮನವಿ ಮಾಡಿಕೊಳ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com