ಅಪ್ಪು ಪುಣ್ಯ ಸ್ಮರಣೆ: ನಾಳೆ ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ

ಅಕಾಲಿಕವಾಗಿ ಎಲ್ಲರನ್ನೂ ಅಗಲಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆಯ ಅಂಗವಾಗಿ ನಗರದ ಅರಮನೆ ಮೈದಾನದಲ್ಲಿ ಮಂಗಳವಾರ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಪುನೀತ್ ರಾಜ್ ಕುಮಾರ್ ಸಮಾಧಿ
ಪುನೀತ್ ರಾಜ್ ಕುಮಾರ್ ಸಮಾಧಿ
Updated on

ಬೆಂಗಳೂರು: ಅಕಾಲಿಕವಾಗಿ ಎಲ್ಲರನ್ನೂ ಅಗಲಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆಯ ಅಂಗವಾಗಿ ನಗರದ ಅರಮನೆ ಮೈದಾನದಲ್ಲಿ ಮಂಗಳವಾರ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.

ಈ ಸಂದರ್ಭದಲ್ಲಿ ಯಾವುದೇ ಅಚಾತುರ್ಯ, ಅಹಿತಕರ ಘಟನೆ ನಡೆಯದಂತೆ ಹಾಗೂ ಆಗಮಿಸುವ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲ ಬಗೆಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ತಿಥಿ ಕಾರ್ಯದ ಅಂಗವಾಗಿ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ನಟ ಶಿವರಾಜ್ ಕುಮಾರ್ ಅವರು ಇಂದು ಮಾಹಿತಿ ನೀಡಿದ್ದಾರೆ.

ನಾಳೆ ಬೆಳಗ್ಗೆ 11.30 ರಿಂದ ಪ್ಯಾಲೇಸ್​ ಗ್ರೌಂಡ್​ನಲ್ಲಿ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದ್ದು, ಏಕಕಾಲಕ್ಕೆ 5 ಸಾವಿರ ಜನರು ಕುಳಿತು ಊಟ ಮಾಡುವಂತಹ ವ್ಯವಸ್ಥೆ ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com