ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು
ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Published: 04th October 2021 12:33 PM | Last Updated: 04th October 2021 01:25 PM | A+A A-

ಸತ್ಯಜಿತ್
ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸದ್ಯ ಸತ್ಯಜಿತ್ ಪರಿಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಗ್ಯಾಂಗ್ರಿನ್ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು. ಈಗ ಸಕ್ಕರೆ ಕಾಯಿಲೆ ಮತ್ತು ಇನ್ನಿತರೆ ವಯೋಸಹಜ ಅನಾರೋಗ್ಯದ ಕಾರಣ ಸತ್ಯಜಿತ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿದೆ.
ಸತ್ಯಜಿತ್ ಪುತ್ರ ಹೇಳಿರುವ ಪ್ರಕಾರ ಪ್ರಸ್ತುತ ಅವರ ಪರಿಸ್ಥಿತಿ ಗಂಭೀರವಾಗಿದೆ. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಲೇ ಇದೆ. ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.