ಉತ್ತರಾಖಂಡದ ಹಿಮಚ್ಛಾದಿತ ಶಿಖರ ಪ್ರಾಂತ್ಯದಲ್ಲಿ ನಟ ಶರಣ್ ಹಾರರ್ ಸಿನಿಮಾ ಚಿತ್ರೀಕರಣ

50 ದಿನಗಳ ಹಿಂದೆ ನವನೀತ್ ಅವರು ಶರಣ್ ಅವರಿಗೆ ಹೊಸ ಸಿನಿಮಾದ ಕಥೆ ಹೇಳಿದ್ದರಂತೆ. ಕಥೆ ಕೇಳುತ್ತಲೇ ಇಂಪ್ರೆಸ್ ಆದ ಶರಣ್ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದರು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ.
ನಟ ಶರಣ್
ನಟ ಶರಣ್
Updated on

ಬೆಂಗಳೂರು: ಸದ್ಯ ಗುರು ಶಿಷ್ಯರು ಸಿನಿಮಾ ಚಿತ್ರೀಕರಣದಲ್ಲಿ ಬಿಝಿಯಾಗಿರುವ ನಟ ಶರಣ್, 'ಕರ್ವ' ನಿರ್ದೇಶಕ ನವನೀತ್ ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇನ್ನೂ ಹೆಸರಿಡದ ಆ ಚಿತ್ರ ಸಂಪೂರ್ಣ ಹಾರರ್ ಸಿನಿಮಾ ಎನ್ನಲಾಗಿದೆ. ತರುಣ್ ಶಿವಪ್ಪ ಈ ಸಿನಿಮಾ ನಿರ್ಮಾಪಕರು. ನಿರ್ದೇಶಕ ಅವರ ರೋಸ್, ವಿಕ್ಟರಿ2 ಸಿನಿಮಾಗಳನ್ನು ಈ ಹಿಂದೆ ಅವರೇ ನಿರ್ಮಾಣ ಮಾಡಿದ್ದರು.

50 ದಿನಗಳ ಹಿಂದೆ ನವನೀತ್ ಅವರು ಶರಣ್ ಅವರಿಗೆ ಹೊಸ ಸಿನಿಮಾದ ಕಥೆ ಹೇಳಿದ್ದರಂತೆ. ಕಥೆ ಕೇಳುತ್ತಲೇ ಇಂಪ್ರೆಸ್ ಆದ ಶರಣ್ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದರು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ಈ ಹಿಂದೆ ಕರ್ವ ಮತ್ತು ಬಕಾಸುರ ಸಿನಿಮಾಗಳನ್ನು ನಿರ್ದೇಶಿಸಿರುವ ನವನೀತ್ ಅವರಿಗೆ ಇದು ಮೂರನೇ ಸಿನಿಮಾ.

ಸಿನಿಮಾದ ಶೇ.80ರಷ್ಟು ಭಾಗ ಉತ್ತರಾಖಂಡದ ಹಿಮಚ್ಛಾದಿತ ಪ್ರದೇಶಗಳಲ್ಲಿ ನಡೆಯುವುದು ಎಂದು ನಿರ್ದೇಶಕರು ಹೇಳಿದ್ದಾರೆ. ಸೆನಿಮೆಟೊಗ್ರಾಫರ್ ಆಗಿ ಅನುಪ್ ಕಟ್ಟುಕರನ್ ಅವರು ಆಯ್ಕೆಯಾಗಿದ್ದಾರೆ. ಅವರು ಈ ಹಿಂದೆ ಹಲವು ಜನಪ್ರಿಯ ಜಾಹೀರಾತುಗಳಿಗೆ ಸಿನಿಮೆಟೊಗ್ರಾಫರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಕನ್ನಡದಲ್ಲಿ ಇದು ಅವರ ಮೊದಲ ಸಿನಿಮಾ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com