ಕೋಟಿಗೊಬ್ಬ-3 ಬಿಡುಗಡೆ ವಿಳಂಬದ ಹಿಂದೆ ಷಡ್ಯಂತ್ರ: ನಿರ್ಮಾಪಕ ಸೂರಪ್ಪ ಬಾಬು ಗಂಭೀರ ಆರೋಪ

ಕೋಟಿಗೊಬ್ಬ-3 ಬಿಡುಗಡೆ ವಿಳಂಬದ ಹಿಂದೆ ಕೆಲವರ ಷಡ್ಯಂತ್ರವಿದ್ದು, ನಾಳೆ ಬೆಳಗ್ಗೆ 6 ಗಂಟೆಗೇ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಸೂರಪ್ಪ ಬಾಬು ಹೇಳಿದ್ದಾರೆ.
ನಿರ್ಮಾಪಕ ಸೂರಪ್ಪ ಬಾಬು
ನಿರ್ಮಾಪಕ ಸೂರಪ್ಪ ಬಾಬು
Updated on

ಬೆಂಗಳೂರು: ಕೋಟಿಗೊಬ್ಬ-3 ಬಿಡುಗಡೆ ವಿಳಂಬದ ಹಿಂದೆ ಕೆಲವರ ಷಡ್ಯಂತ್ರವಿದ್ದು, ನಾಳೆ ಬೆಳಗ್ಗೆ 6 ಗಂಟೆಗೇ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಸೂರಪ್ಪ ಬಾಬು ಹೇಳಿದ್ದಾರೆ.

‘ಕೋಟಿಗೊಬ್ಬ 3’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ಚಿತ್ರ ಬಿಡುಗಡೆಯಾಗುತ್ತಿಲ್ಲ. ಈ ಕುರಿತು ನಿರ್ಮಾಪಕ ಸೂರಪ್ಪ ಬಾಬು ವಿಡಿಯೋ ಮೂಲಕ ಮನವಿ ಮಾಡಿದ್ದು, ವಿತರಕರ ಷಡ್ಯಂತ್ರದಿಂದ ಇಂದು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಾಳೆ ಮುಂಜಾನೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಶೋ ಆರಂಭವಾಗಲಿದೆ. ನಾಳೆಯಿಂದ (ಶುಕ್ರವಾರ) ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. 

'ಇಂದು ಕೋಟಿಗೊಬ್ಬ3 ರಿಲೀಸ್ ಮಾಡಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ಎಲ್ಲರೂ ನನ್ನನ್ನ ಕ್ಷಮಿಸಿ. ಕೆಲವರ ಷಡ್ಯಂತರದಿಂದ ಕೋಟಿಗೊಬ್ಬ ರಿಲೀಸ್ ಮಾಡಲು ಸಾಧ್ಯವಾಗಿಲ್ಲ. ಈ ಹಿಂದೆಯೂ ಸಾಕಷ್ಟು ಷಡ್ಯಂತರ ಮಾಡಿದ್ದರು. ಈಗಲೂ ಹಾಗೇ ಆಗಿದೆ. ಸುದೀಪ್ ಅಭಿಮಾನಿಗಳು ಕ್ಷಮಿಸಬೇಕು. ನಾಳೆ ಬೆಳಗ್ಗೆ (ಅಕ್ಟೋಬರ್ 15) ಆರು ಗಂಟೆಯಿಂದ ಶೋ ಆರಂಭವಾಗಲಿವೆ ಎಂದು ಹೇಳಿದರು.

ಅಂತೆಯೇ ಈ ಕುರಿತು ಸುದೀಪ್ ಅವರಲ್ಲೂ ಕ್ಷಮೆ ಕೋರಿರುವ ಸೂರಪ್ಪ ಬಾಬು, ಅಭಿಮಾನಿಗಳಿಗೆ ಅವರು ಟ್ವೀಟ್ ಮೂಲಕ ಮಾಹಿತಿ ನೀಡಬೇಕೆಂದು ಕೋರಿದ್ದಾರೆ. 

ಸುದೀಪ್ ಟ್ವೀಟ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com