ಹಾಸ್ಯ ನಟ ಬುಲೆಟ್ ಪ್ರಕಾಶ್ ಪುತ್ರನ ಮೇಲೆ‌ ಮಂಗಳಮುಖಿಯರಿಂದ ದಾಳಿ..!

ಸ್ಯಾಂಡಲ್ ವುಡ್ ನ ಹಾಸ್ಯನಟ ಬುಲೆಟ್ ಪ್ರಕಾಶ್ ಪುತ್ರ ಹಾಗೂ ಉದಯೋನ್ಮುಖ ನಟ ರಕ್ಷಕ್ ಸೇನಾ ಮೇಲೆ ಕೆಲ ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಕೇಳಿ ಬಂದಿದೆ.
ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಸೇನಾ
ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಸೇನಾ

ಬೆಂಗಳೂರು: ಸ್ಯಾಂಡಲ್ ವುಡ್ ನ ಹಾಸ್ಯನಟ ಬುಲೆಟ್ ಪ್ರಕಾಶ್ ಪುತ್ರ ಹಾಗೂ ಉದಯೋನ್ಮುಖ ನಟ ರಕ್ಷಕ್ ಸೇನಾ ಮೇಲೆ ಕೆಲ ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಕೇಳಿ ಬಂದಿದೆ.

ಮಂಗಳವಾರ ರಾತ್ರಿ 9 ಗಂಟೆಗೆ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್, ಜಿಮ್​ನಿಂದ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಹೆಬ್ಬಾಳ ಬಳಿ ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ. ಹೆಬ್ಬಾಳ ಪ್ಲೈ ಓವರ್ ಬಳಿ ಮಂಗಳಮುಖಿಯರು ರಕ್ಷಕ್ ಬ್ಯಾಗ್ ಹಿಡಿದು ಎಳೆದಿದ್ದು, ಪರಿಣಾಮ ರಕ್ಷಕ್ ಬೈಕ್​​ನಿಂದ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ರಕ್ಷಕ್ ಕಾಲಿಗೆ ತರಚಿದ ಗಾಯಗಳಾಗಿವೆ. ಅಲ್ಲದೇ, ಮಂಗಳಮುಖಿಯರ ದಾಳಿಯಿಂದ ತಪ್ಪಿಸಿಕೊಳ್ಳಲು ರಕ್ಷಕ್ ಫ್ಲೈ ಓವರ್ ಮೇಲೆಯೇ ಬೈಕ್ ಬಿಟ್ಟು ಓಡಿಹೋಗಿದ್ದಾರೆ. ಬಳಿಕ ಪೊಲೀಸರ ಸಹಾಯದಿಂದ ಬೈಕ್ ವಾಪಸ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ. 

ಈ ಕುರಿತು ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ವೇಳೆ ಹೆಬ್ಬಾಳ ಫ್ಲೈ ಓವರ್ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್​ನಿಂದ ಕೆಳಗೆ ಬಿದ್ದ ರಕ್ಷಕ್ ಕಾಲಿಗೆ ತರಚಿದ ಗಾಯಗಳಿದ್ದು, ಬೈಕ್ ಗೂ ಕೂಡ ಡ್ಯಾಮೇಜ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನು ಇತ್ತೀಚೆಗಷ್ಟೇ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಚಿತ್ರರಂಗಕ್ಕೆ ಎಂಟ್ರಿ ಕೊಡುವ ಮಾತನಾಡಿದ್ದರು. ಈಗಾಗಲೇ ಈ ಕುರಿತಂತೆ ಅವರು ತಯಾರಿಯಲ್ಲಿದ್ದು, ತಂದೆ ಬುಲೆಟ್ ಪ್ರಕಾಶ್ ಅವರ ನಿಧನದ ಬಳಿಕ ರಕ್ಷಕ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com