'ಗುಲ್ಟೂ' ಶಂಕರ್ ಮುಂದಿನ ಸಿನಿಮಾ 'ಮೂಲತಃ ನಮ್ಮವರೇ'!

ಚೊಚ್ಚಲ ಸಿನಿಮಾ ಗುಲ್ಟೂ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ನವೀನ್ ಶಂಕರ್ ಧರಣಿ ಮಂಡಲ ಮಧ್ಯದೊಳಗೆ ಚಿತ್ರದಲ್ಲಿ ಬಾಕ್ಸರ್ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಮೂಲತಃ ನಮ್ಮವರೇ ಎಂಬ ಟೈಟಲ್ ನ ಚಿತ್ರೀಕರಣ ಮುಗಿಸಿದ್ದಾರೆ.
ನವೀನ್ ಶಂಕರ್
ನವೀನ್ ಶಂಕರ್

ಚೊಚ್ಚಲ ಸಿನಿಮಾ ಗುಲ್ಟೂ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ನವೀನ್ ಶಂಕರ್ ಧರಣಿ ಮಂಡಲ ಮಧ್ಯದೊಳಗೆ ಚಿತ್ರದಲ್ಲಿ ಬಾಕ್ಸರ್ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಮೂಲತಃ ನಮ್ಮವರೇ ಎಂಬ ಟೈಟಲ್ ನ ಚಿತ್ರೀಕರಣ ಮುಗಿಸಿದ್ದಾರೆ.

ರಂಗಭೂಮಿ ನಂಟಿರುವ ಚೇತನ್ ಭಾಸ್ಕರಯ್ಯ  'ಮೂಲತಃ ನಮ್ಮವರೇ' ಸಿನಿಮಾದ ಮೂಲಕ ನಿರ್ದೇಶಕರಾಗಿದ್ದಾರೆ. 'ನನಗೆ ಸಿನಿಮಾ ನಿರ್ದೇಶನದಲ್ಲಿ ತುಂಬ ಆಸಕ್ತಿ ಇತ್ತು. ಈ ಹಿಂದೆ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿದ್ದೇನೆ‌‌. ಹಿರಿತೆರೆಯಲ್ಲಿ ಇದು ನನಗೆ ಮೊದಲ ಚಿತ್ರ.

'ಮೂಲತ: ನಮ್ಮವರೇ' ಇದೊಂದು ಕೌಟುಂಬಿಕ ಚಿತ್ರ. ಅಪ್ಪ- ಮಗನ ಬಾಂಧವ್ಯದ ಸನ್ನಿವೇಶಗಳೇ ಈ ಚಿತ್ರದ ಹೈಲೆಟ್ . ಬೆಂಗಳೂರು ಹಾಗೂ ಕರಾವಳಿಯಲ್ಲಿ ಚಿತ್ರೀಕರಣ ಮಾಡಿದ್ದೇವೆ‌. ನವೀನ್ ಶಂಕರ್ ಬಿಟ್ಟರೆ ಬಹುತೇಕರಿಗೆ ಇದು ಮೊದಲ ಸಿನಿಮಾ' ಎಂದರು ನಿರ್ದೇಶಕ ಚೇತನ್ ಭಾಸ್ಕರಯ್ಯ.

ಅಂದಹಾಗೆ, ಅವರು ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಮುಂಬೈನ ತಾನ್ಯಾ ಈ ಚಿತ್ರದ ನಾಯಕಿ. ಅವಿನಾಶ್, ಮಾಳವಿಕಾ ಅವಿನಾಶ್, ತೆಲುಗಿನ ಸತ್ಯಪ್ರಕಾಶ್, ಕಾವ್ಯಾ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

'ಮೂಲತಹ ನಮ್ಮವರೇ' ಮ್ಯೂಸಿಕ್ ಬ್ಯಾಂಡ್ ಏಕ್ ಕ್ಯಾಬ್ ಸಂಗೀತ ನೀಡಲಿದ್ದು, ಜುವೀನ್ ಸಿಂಗ್ ಹಿನ್ನೆಲೆ ಸಂಗೀತದ ಹೊಣೆ ಹೊತ್ತಿದ್ದಾರೆ. ಚಿತ್ರಕ್ಕೆ ಚಂತು ಅವರ ಛಾಯಾಗ್ರಹಣವಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com