ಅನುಶ್ರೀ ಮದುವೆಯಾದ ನಂತರವೇ ನನ್ನ ವಿವಾಹ: ಧನಂಜಯ್

ಆ್ಯಂಕರ್ ಅನುಶ್ರೀ ವಿವಾಹವಾದ ನಂತರವೇ ನನ್ನ ಮದುವೆಯಾಗುವುದು ಎಂದು ನಟ ಡಾಲಿ ಧನಂಜಯ್ ಹೇಳಿದ್ದಾರೆ.  ನಟ ಧನಂಜಯ್ ಹಾಗೂ ಅದಿತಿ ಪ್ರಭುದೇವ  ‘ಒನ್ಸ್ ಅಪಾನ ಎ ಟೈಮ್ ಇನ್ ಜಮಾಲಿ ಗುಡ್ಡ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಅನುಶ್ರೀ ಮತ್ತು ಧನಂಜಯ
ಅನುಶ್ರೀ ಮತ್ತು ಧನಂಜಯ
Updated on

ಆ್ಯಂಕರ್ ಅನುಶ್ರೀ ವಿವಾಹವಾದ ನಂತರವೇ ನನ್ನ ಮದುವೆಯಾಗುವುದು ಎಂದು ನಟ ಡಾಲಿ ಧನಂಜಯ್ ಹೇಳಿದ್ದಾರೆ.  ನಟ ಧನಂಜಯ್ ಹಾಗೂ ಅದಿತಿ ಪ್ರಭುದೇವ  ‘ಒನ್ಸ್ ಅಪಾನ ಎ ಟೈಮ್ ಇನ್ ಜಮಾಲಿ ಗುಡ್ಡ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಈ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಹಿಂದೆಂದೂ ಮಾಡಿರದ ಪಾತ್ರದಲ್ಲಿ ಧನಂಜಯ್ ಅವರು ಕಾಣಿಸಿಕೊಂಡಿದ್ದಾರೆ ಎಂಬುದಕ್ಕೆ ಟ್ರೇಲರ್ ಸಾಕ್ಷ್ಯ ನೀಡಿದೆ. ಸದಾ ವಿಭಿನ್ನ ಪಾತ್ರಗಳ ಮೂಲಕ ಧನಂಜಯ್ ಅವರು ಗುರುತಿಸಿಕೊಳ್ಳುತ್ತಾರೆ. ಈಗ ಈ ಸಿನಿಮಾ ಮೂಲಕ ಅವರು ಮತ್ತೊಂದು ಪ್ರಯೋಗಾತ್ಮಕ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಪ್ರೀ-ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಧನಂಜಯ್ ಅವರಿಗೆ ಅನುಶ್ರೀ ಅವರು ಮದುವೆ ಬಗ್ಗೆ ಪ್ರಶ್ನೆ ಮಾಡಿದರು.

ನಿಮ್ಮ ಗೆಳೆಯ ವಸಿಷ್ಠ ಸಿಂಹ ಇತ್ತೀಚೆಗೆ ಎಂಗೇಜ್ ಆದರು. ನಿಮ್ಮ ಮದುವೆ ಯಾವಾಗ’ ಎಂದು ಧನಂಜಯ್​ಗೆ ವೇದಿಕೆ ಮೇಲೆ ಅನುಶ್ರೀ ಪ್ರಶ್ನೆ ಮಾಡಿದರು. ಈ ಪ್ರಶ್ನೆಗೆ ಧನಂಜಯ್​ಗೆ ಏನು ಉತ್ತರಿಸಬೇಕು ಎಂಬುದು ತಿಳಿಯಲಿಲ್ಲ. ‘ಮದುವೆ ಆಗಬೇಕಾ?’ ಎಂದು ಫ್ಯಾನ್ಸ್ ಬಳಿ ಪ್ರಶ್ನೆ ಮಾಡಿದರು. ಬಳಿಕ ‘ಫ್ಯಾನ್ಸ್ ಬೇಡ ಎನ್ನುತ್ತಿದ್ದಾರೆ’ ಎಂದು ಧನಂಜಯ್ ಉತ್ತರಿಸಿದರು.

ಅನುಶ್ರೀ ಅವರೂ ಮದುವೆ ಆಗಿಲ್ಲ. ಅವರಿಗೂ ಈ ಬಗ್ಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇರುತ್ತದೆ. ಧನಂಜಯ್ ಅವರಿಗೂ ಇದು ನೆನಪಾಗಿದೆ. ‘ಅನುಶ್ರೀ ಮದುವೆ ಆಗುವ ಘೋಷಣೆ ಮಾಡಿದ ಬೆನ್ನಲ್ಲೇ ನಾನು ಮದುವೆ ಆಗುತ್ತೇನೆ’ ಎಂದು ಘೋಷಣೆ ಮಾಡಿದರು. ‘ನೀವು ತುಂಬಾ ಸಮಯ ಕಾಯಬೇಕಾಗುತ್ತದೆ’ ಎಂದು ಅನುಶ್ರೀ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com