ಅನುಶ್ರೀ ಮದುವೆಯಾದ ನಂತರವೇ ನನ್ನ ವಿವಾಹ: ಧನಂಜಯ್

ಆ್ಯಂಕರ್ ಅನುಶ್ರೀ ವಿವಾಹವಾದ ನಂತರವೇ ನನ್ನ ಮದುವೆಯಾಗುವುದು ಎಂದು ನಟ ಡಾಲಿ ಧನಂಜಯ್ ಹೇಳಿದ್ದಾರೆ.  ನಟ ಧನಂಜಯ್ ಹಾಗೂ ಅದಿತಿ ಪ್ರಭುದೇವ  ‘ಒನ್ಸ್ ಅಪಾನ ಎ ಟೈಮ್ ಇನ್ ಜಮಾಲಿ ಗುಡ್ಡ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಅನುಶ್ರೀ ಮತ್ತು ಧನಂಜಯ
ಅನುಶ್ರೀ ಮತ್ತು ಧನಂಜಯ

ಆ್ಯಂಕರ್ ಅನುಶ್ರೀ ವಿವಾಹವಾದ ನಂತರವೇ ನನ್ನ ಮದುವೆಯಾಗುವುದು ಎಂದು ನಟ ಡಾಲಿ ಧನಂಜಯ್ ಹೇಳಿದ್ದಾರೆ.  ನಟ ಧನಂಜಯ್ ಹಾಗೂ ಅದಿತಿ ಪ್ರಭುದೇವ  ‘ಒನ್ಸ್ ಅಪಾನ ಎ ಟೈಮ್ ಇನ್ ಜಮಾಲಿ ಗುಡ್ಡ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಈ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಹಿಂದೆಂದೂ ಮಾಡಿರದ ಪಾತ್ರದಲ್ಲಿ ಧನಂಜಯ್ ಅವರು ಕಾಣಿಸಿಕೊಂಡಿದ್ದಾರೆ ಎಂಬುದಕ್ಕೆ ಟ್ರೇಲರ್ ಸಾಕ್ಷ್ಯ ನೀಡಿದೆ. ಸದಾ ವಿಭಿನ್ನ ಪಾತ್ರಗಳ ಮೂಲಕ ಧನಂಜಯ್ ಅವರು ಗುರುತಿಸಿಕೊಳ್ಳುತ್ತಾರೆ. ಈಗ ಈ ಸಿನಿಮಾ ಮೂಲಕ ಅವರು ಮತ್ತೊಂದು ಪ್ರಯೋಗಾತ್ಮಕ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಪ್ರೀ-ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಧನಂಜಯ್ ಅವರಿಗೆ ಅನುಶ್ರೀ ಅವರು ಮದುವೆ ಬಗ್ಗೆ ಪ್ರಶ್ನೆ ಮಾಡಿದರು.

ನಿಮ್ಮ ಗೆಳೆಯ ವಸಿಷ್ಠ ಸಿಂಹ ಇತ್ತೀಚೆಗೆ ಎಂಗೇಜ್ ಆದರು. ನಿಮ್ಮ ಮದುವೆ ಯಾವಾಗ’ ಎಂದು ಧನಂಜಯ್​ಗೆ ವೇದಿಕೆ ಮೇಲೆ ಅನುಶ್ರೀ ಪ್ರಶ್ನೆ ಮಾಡಿದರು. ಈ ಪ್ರಶ್ನೆಗೆ ಧನಂಜಯ್​ಗೆ ಏನು ಉತ್ತರಿಸಬೇಕು ಎಂಬುದು ತಿಳಿಯಲಿಲ್ಲ. ‘ಮದುವೆ ಆಗಬೇಕಾ?’ ಎಂದು ಫ್ಯಾನ್ಸ್ ಬಳಿ ಪ್ರಶ್ನೆ ಮಾಡಿದರು. ಬಳಿಕ ‘ಫ್ಯಾನ್ಸ್ ಬೇಡ ಎನ್ನುತ್ತಿದ್ದಾರೆ’ ಎಂದು ಧನಂಜಯ್ ಉತ್ತರಿಸಿದರು.

ಅನುಶ್ರೀ ಅವರೂ ಮದುವೆ ಆಗಿಲ್ಲ. ಅವರಿಗೂ ಈ ಬಗ್ಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇರುತ್ತದೆ. ಧನಂಜಯ್ ಅವರಿಗೂ ಇದು ನೆನಪಾಗಿದೆ. ‘ಅನುಶ್ರೀ ಮದುವೆ ಆಗುವ ಘೋಷಣೆ ಮಾಡಿದ ಬೆನ್ನಲ್ಲೇ ನಾನು ಮದುವೆ ಆಗುತ್ತೇನೆ’ ಎಂದು ಘೋಷಣೆ ಮಾಡಿದರು. ‘ನೀವು ತುಂಬಾ ಸಮಯ ಕಾಯಬೇಕಾಗುತ್ತದೆ’ ಎಂದು ಅನುಶ್ರೀ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com