
ಕಾಣೆಯಾದವರ ಬಗ್ಗೆ ಪ್ರಕಟಣೆ ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಉಗ್ರಂ ಖ್ಯಾತಿಯ ನಟ ತಿಲಕ್ ಶೇಖರ್, ಇದೀಗ ರಾಜಕೀಯ ವೈಜ್ಞಾನಿಕ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ.
ದ್ವಂದ್ವ ಎಂಬ ಶೀರ್ಷಿಕೆಯನ್ನು ಹೊಂದಿರುವ ಈ ಚಿತ್ರವನ್ನು ಇದೇ ಮೊದಲ ಬಾರಿಗೆ ಎಲ್. ಭರತ್ ನಿರ್ದೇಶಿಸುತ್ತಿದ್ದಾರೆ ಮತ್ತು ಇದು ಸೂರ್ಯಾಸ್ತ ಮತ್ತು ಸೂರ್ಯೋದಯದ ನಡುವಿನ 12 ಗಂಟೆಗಳ ಕಾಲ ನಡೆಯುವ ಕಥೆಯಾಗಿದೆ.
ಶೇ 80ರಷ್ಟು ಚಿತ್ರೀಕರಣ ಮುಗಿದಿದ್ದು, ಬೆಂಗಳೂರು, ತುಮಕೂರು, ಸಕಲೇಶಪುರ ಮತ್ತು ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ದ್ವಂದ್ವ ಈಗ ಪೋಸ್ಟ್-ಪ್ರೊಡಕ್ಷನ್ ಹಂತದಲ್ಲಿದ್ದು, ಈ ಸಿನಿಮಾ 2023ರ ಬೇಸಿಗೆಯಲ್ಲಿ ಚಿತ್ರಮಂದಿರಗಳಿಗೆ ಬರುವ ನಿರೀಕ್ಷೆಯಿದೆ.
ತಿಲಕ್ ನಾಯಕರಾಗಿರುವ ಈ ಚಿತ್ರದಲ್ಲಿ ಆಸಿಯಾ ಫಿರ್ದೋಸೆ, ಬಾಲ ಕಲಾವಿದೆ ಹಾಸ್ಯ, ನಯನಾ ಮತ್ತು ಶೋಭರಾಜ್ ಪ್ರಮುಖ ಪಾತ್ರಗಳಲ್ಲಿದ್ದಾರೆ.
ಗ್ಯಾಂಗ್ಸ್ಟರ್ ಅಲ್ಲ ಪ್ರಾಂಕ್ಸ್ಟರ್, ಕರ್ವ 3 ಮತ್ತು ಜನವರಿ ಮೊದಲ ವಾರದಲ್ಲಿ ಸೆಟ್ಟೇರಲಿರುವ ಇನ್ನೂ ಹೆಸರಿಡದ ತಿಲಕ್ ಕಾಣಿಸಿಕೊಳ್ಳಲಿದ್ದಾರೆ.
Advertisement