'ಒಂದು ಕಡೆ ಬೇಸರ, ಒಂದು ಕಡೆ ಖುಷಿ, ಹೆಮ್ಮೆ ಈ ಕ್ಷಣದಲ್ಲಿ ಆಗುತ್ತಿದೆ': ಮೌನ ಮುರಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ, ಕನ್ನಡ ನಾಡು, ನುಡಿಯ ಬಗ್ಗೆ ಸಹಜವಾಗಿ ಅಭಿನಯಿಸಿ ತೋರಿಸಿರುವ ಚಿತ್ರ ನಾಳೆ ಬಿಡುಗಡೆಯಾಗುತ್ತಿದ್ದು, ಈಗಾಗಲೇ ಟಿಕೆಟ್ ಸೋಲ್ಡ್ ಔಟ್ ಆಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ, ಕನ್ನಡ ನಾಡು, ನುಡಿಯ ಬಗ್ಗೆ ಸಹಜವಾಗಿ ಅಭಿನಯಿಸಿ ತೋರಿಸಿರುವ ಚಿತ್ರ ನಾಳೆ ಬಿಡುಗಡೆಯಾಗುತ್ತಿದ್ದು, ಈಗಾಗಲೇ ಟಿಕೆಟ್ ಸೋಲ್ಡ್ ಔಟ್ ಆಗಿದೆ.

ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನನ್ನು ಕೊನೆಯ ಬಾರಿಗೆ ದೊಡ್ಡ ಪರದೆಯ ಮೇಲೆ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಕನ್ನಡಿಗರಿಗೆ, ಪುನೀತ್ ಅಭಿಮಾನಿಗಳಿಗೆ ಇದೊಂದು ರೀತಿಯಲ್ಲಿ ಹಬ್ಬ.

ಕಳೆದ ವರ್ಷ ಅಕ್ಟೋಬರ್ 29ರಂದು ಪುನೀತ್ ರಾಜ್ ಕುಮಾರ್ ಹಠಾತ್ ಆಗಿ ಹೃದಯಾಘಾತದಿಂದ ನಿಧನ ಹೊಂದಿದ ನಂತರ ಅವರ ಪತ್ನಿ ಅಶ್ವಿನಿಯವರು ಸಾರ್ವಜನಿಕವಾಗಿ ಎಲ್ಲಿಯೂ ಮಾತನಾಡಿರಲಿಲ್ಲ. ಯಾವ ಪ್ರತಿಕ್ರಿಯೆಯನ್ನೂ ನೀಡಿರಲಿಲ್ಲ.

ಇದೀಗ ಗಂಧದ ಗುಡಿ ಚಿತ್ರದ ಬಿಡುಗಡೆ ಸಮಯದಲ್ಲಿ ಚಿತ್ರದ ತೆರೆಯ ಹಿಂದಿನ ಪಯಣವನ್ನು ನಿರ್ದೇಶಕ ಸಂತೋಷ್ ಆನಂದ್‌ರಾಮ್ ಅವರೊಂದಿಗೆ ಸಂದರ್ಶನದಲ್ಲಿ ವಿವರಿಸಿದ್ದಾರೆ. ಈ ಚಿತ್ರದಲ್ಲಿ ಪುನೀತ್ ಜೊತೆಗೆ ಅಶ್ವಿನಿಯವರು ಕೂಡ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com