ಪುನೀತ್ ರಾಜಕುಮಾರ್ ಗೆ ಕರ್ನಾಟಕ ರತ್ನ: ಸಮಾರಂಭಕ್ಕೆ ರಜನಿಕಾಂತ್, ಜೂ.ಎನ್‌ಟಿಆರ್ ಆಗಮನ ಖಚಿತ!

ದಿವಂಗತ ‘ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರವಾಗಿ ನ. 1ರಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ರಜನಿಕಾಂತ್, ಜೂನಿಯರ್ ಎನ್‌ಟಿಆರ್ ಬರುವುದು ಖಚಿತವಾಗಿದೆ.
ಪುನೀತ್ ರಾಜಕುಮಾರ್
ಪುನೀತ್ ರಾಜಕುಮಾರ್
Updated on

ಬೆಂಗಳೂರು: ದಿವಂಗತ ‘ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರವಾಗಿ ನ. 1ರಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ರಜನಿಕಾಂತ್, ಜೂನಿಯರ್ ಎನ್‌ಟಿಆರ್ ಬರುವುದು ಖಚಿತವಾಗಿದೆ.

ವಿಧಾನಸೌಧ ಮುಂಭಾಗದ ಮೆಟ್ಟಿಲ ಮೇಲೆ ಸಂಜೆ 4 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಭಾಗವಹಿಸುತ್ತಿರುವುದಾಗಿ ನಟ ರಜನಿಕಾಂತ್ ತಿಳಿಸಿದ್ದಾರೆ. ಇತ್ತ ಟಾಲಿವುಡ್ ನಟ ಜೂನಿಯರ್ ಎನ್‌ಟಿಆರ್ ಅವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿರುವುದಾಗಿ ಆಯೋಜಕರು ತಿಳಿಸಿದ್ದಾರೆ.

ಪುನೀತ್ ಗೆ ನೀಡುತ್ತಿರುವ ಕರ್ನಾಟಕ ರತ್ನ ಪ್ರಶಸ್ತಿಯು ಬೆಳ್ಳಿಯ ಸ್ಮರಣಿಕೆ, ಜೊತೆಗೆ, 50 ಗ್ರಾಂ ಚಿನ್ನದ ಪದಕ ಇರಲಿದೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ವಿ. ಸುನಿಲ್ ಕುಮಾರ್ ಸೇರಿದಂತೆ ಸಚಿವರು, ಶಾಸಕರು‌ ಭಾಗವಹಿಸಲಿದ್ದಾರೆ. ಗಾಯಕ ವಿಜಯಪ್ರಕಾಶ್ ತಂಡದಿಂದ ಸಂಗೀತ ರಸಮಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com