
ಕೃಷ್ಣ ರಾವ್
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೆಜಿಎಫ್ ಸಿನಿಮಾ ಖ್ಯಾತಿಯ ತಾತ ಕೃಷ್ಣ ರಾವ್ ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಸೀತಾಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಯಲ್ಲಿ ಕೃಷ್ಣ ರಾವ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ಇದನ್ನು ಓದಿ: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು!
ನಾಳೆ ಬೆಳಗ್ಗೆ 11:00 ಘಂಟೆಗೆ ಸೀತಾ ಸರ್ಕಲ್ನಲ್ಲಿರುವ ಕೃಷ್ಣ ಅವರ ಅಣ್ಣನ ಮನೆ ಬಳಿಯ ಸ್ಮಶಾನದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.
ಕೃಷ್ಣ ರಾಮ್ ಅವರು ನಟ ಶಂಕರ್ ನಾಗ್ ಕಾಲದಿಂದಲೂ ಕನ್ನಡ ಚಿತ್ರರಂಗದಲ್ಲಿದ್ದರು. ಆದರೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಹಾಗೂ 'ಕೆಜಿಎಫ್ 2' ಸಿನಿಮಾಗಳಲ್ಲಿ ನಟಿಸಿದ ನಂತರ ಕೃಷ್ಣ ರಾವ್ ಅವರು ಕೆಜಿಎಫ್ ತಾತ ಎಂದೇ ಫೇಮಸ್ ಆಗಿದ್ದರು.
ಕೆಜಿಎಫ್ 2 ಚಿತ್ರದಲ್ಲಿನ ಅವರ ಡೈಲಾಗ್ಗೆ ಫ್ಯಾನ್ಸ್ ಫಿದಾ ಆಗಿದ್ದರು. ಚಿತ್ರದಲ್ಲಿ ಅವರು ಹೆಚ್ಚಾಗಿ ಕಾಣಿಸಿಕೊಳ್ಳದಿದ್ದರು ಅವರ ಪಾತ್ರ ಮತ್ತು ಡೈಲಾಗ್ನಿಂದ ಫ್ಯಾನ್ಸ್ಗಳಿಗೆ ಇಷ್ಟವಾಗಿದ್ದರು.