social_icon

ವೈಯಕ್ತಿಕ ವಿಚಾರವನ್ನು ಕ್ಯಾಮರಾ ಮುಂದೆ ಹೇಳಲು ಆಗಲ್ಲ; ಕಾಂತಾರ ಸಿನಿಮಾ ನೋಡಿ ಟೀಮ್ ಗೆ ಮೆಸೇಜ್ ಮಾಡಿದ್ದೆ: ರಶ್ಮಿಕಾ ಮಂದಣ್ಣ

ಆಂಗ್ಲ ಮಾಧ್ಯಮದ ಸಂದರ್ಶನವೊಂದರಲ್ಲಿ ಮೊದಲ ಸಿನಿಮಾದ ಪ್ರೊಡಕ್ಷನ್ ಹೌಸ್ ಹೆಸರು ಹೇಳದೆ ಸನ್ನೆ ಮೂಲಕ ಮಾತನಾಡಿದ್ದ ರಶ್ಮಿಕಾ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

Published: 09th December 2022 02:34 PM  |   Last Updated: 09th December 2022 04:46 PM   |  A+A-


Rashmika mandanna

ರಶ್ಮಿಕಾ ಮಂದಣ್ಣ

Posted By : shilpa
Source : Online Desk

ನಟಿ ರಶ್ಮಿಕಾ ಮಂದಣ್ಣ ಇತ್ತೀಚಿಗನ ದಿನಗಳಲ್ಲಿ ಮತ್ತೆ ಹಿಗ್ಗಾಮುಗ್ಗಾ ಟ್ರೋಲ್ ಆಗುತ್ತಿದ್ದಾರೆ. ಆಂಗ್ಲ ಮಾಧ್ಯಮದ ಸಂದರ್ಶನವೊಂದರಲ್ಲಿ ಮೊದಲ ಸಿನಿಮಾದ ಪ್ರೊಡಕ್ಷನ್ ಹೌಸ್ ಹೆಸರು ಹೇಳದೆ ಸನ್ನೆ ಮೂಲಕ ಮಾತನಾಡಿದ್ದ ರಶ್ಮಿಕಾ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

ರಶ್ಮಿಕಾ ತಮ್ಮ ವೃತ್ತಿಜೀವನವನ್ನು ಕನ್ನಡ ಚಿತ್ರರಂಗದಲ್ಲಿ ಕಿರಿಕ್ ಪಾರ್ಟಿ ಮೂಲಕ ಆರಂಭಿಸಿದರು.  ಕಾಂತಾರ ಚಿತ್ರವನ್ನು ನೋಡಿದ್ದೀರಾ ಎಂದು ರಶ್ಮಿಕಾ ಅವರನ್ನು ಕೆಲದಿನಗಳ ಹಿಂದೆ ಕೇಳಿದಾಗ, ಸಿನಿಮಾ ವೀಕ್ಷಿಸಿಲ್ಲ ಎಂದು ಉತ್ತರಿಸಿದರು. ಕನ್ನಡದವರಾಗಿ ತಮಗೆ ವೃತ್ತಿಜೀವನ ಆರಂಭಿಸಲು ಅವಕಾಶ ಕೊಟ್ಟಿದ್ದ ನಿರ್ದೇಶಕನ ಸಿನಿಮಾ ನೋಡಿಲ್ಲ ಎಂಬ ಕಾರಣಕ್ಕೆ ರಶ್ಮಿಕಾ ಅವರನ್ನು ಸಾಕಷ್ಟು ಟ್ರೋಲ್‌ ಮಾಡಲಾಗಿತ್ತು. ಕನ್ನಡ ಚಲನಚಿತ್ರೋದ್ಯಮವು ನಟಿಯ ಮೇಲೆ ಬ್ಯಾನ್‌ ಹೇರಲು ಯೋಜಿಸುತ್ತಿದೆ ಎಂಬ ಊಹಾಪೋಹಗಳು ಸಹ ಕೇಳಿಬಂದಿದ್ದವು.

ಹೈದರಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ, ರಶ್ಮಿಕಾ ಇದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ. "ಬಿಡುಗಡೆಯಾದ ಎರಡು ದಿನಗಳ ನಂತರ ಕಾಂತಾರ ಚಿತ್ರವನ್ನು ನೋಡಿದ್ದೀರಾ ಎಂದು ನನ್ನನ್ನು ಕೇಳಿದರು ಮತ್ತು ನಾನು ಆಗ ನೋಡಿರಲಿಲ್ಲ. ಅದಕ್ಕೆ ನಾನು ಪ್ರಾಮಾಣಿಕವಾಗಿ ಉತ್ತರಿಸಿದೆ.

ಇದನ್ನೂ ಓದಿ: ಕೈ ಸನ್ನೆ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಮತ್ತೆ ಟ್ರೋಲ್; ರಿಷಬ್ ಶೆಟ್ಟಿ ಏನಂದ್ರು?

ಆದರೆ, ನಾನು ಇತ್ತೀಚೆಗೆ ಕಾಂತಾರ ಸಿನಿಮಾ ನೋಡಿದ್ದೇನೆ. ಅಲ್ಲದೇ ಟೀಂಗೆ ಮೆಸೇಜ್‌ ಮಾಡಿ ಅಭಿನಂದಿಸಿದೆ" ಆ ಕಡೆಯಿಂದಲೂ ನನಗೆ ರಿಪ್ಲೈ ಬಂದಿತ್ತು ಎಂದು ರಶ್ಮಿಕಾ ಹೇಳಿದರು.

ಇದೇ ವೇಳೆ ಬ್ಯಾನ್‌ ವಿಚಾರವಾಗಿ ಕೇಳಿದಾಗ, ಒಳಗಡೆ ಏನಾಗ್ತಿದೆ ಎಂದು ಈ  ಪ್ರಪಂಚಕ್ಕೆ ಗೊತ್ತಿಲ್ಲ. ಇಲ್ಲಿ ಏನಾಗಿದೆ ಎನ್ನುವುದು ದೇವರಿಗೆ ಗೊತ್ತು. ನಾನು ಎಲ್ಲಾ ವೈಯಕ್ತಿಕ ವಿಚಾರಗಳನ್ನು ಕ್ಯಾಮರಾ ಮುಂದೆ ಬಂದು ಹೇಳಲು ಸಾಧ್ಯವಿಲ್ಲ.

ನನ್ನ ವೈಯಕ್ತಿಕ ಜೀವನದ ಬಗ್ಗೆ ಜನ ಏನು ಹೇಳುತ್ತಾರೋ ಅದು ಮ್ಯಾಟರ್ ಆಗಲ್ಲ. ವೃತ್ತಿಪರ ಜೀವನದ ಬಗ್ಗೆ ಮಾತನಾಡಿದ್ರೆ ನಾವು ಅದರ ಬಗ್ಗೆ ಗಮನ ಕೊಡಬಹುದು. ಬ್ಯಾನ್ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ' ಎಂದು ಹೇಳಿದ್ದಾರೆ. 


Stay up to date on all the latest ಸಿನಿಮಾ ಸುದ್ದಿ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp