social_icon

ಗಾಳಿಪಟ 2 ಚಿತ್ರದ 'ದೇವ್ಲೆ ದೇವ್ಲೆ' ಹಾಡು ಹಿಟ್ ಲಿಸ್ಟ್ ಗೆ ಸೇರ್ಪಡೆ!

ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಚಿತ್ರದ ಮೂರನೇ ಹಾಡು ಬಿಡುಗಡೆಯಾದ ಕೆಲವೇ ದಿನಗಳ ಅಂತರದಲ್ಲಿ ಹಿಟ್ ಲಿಸ್ಟ್ ಸೇರಿದೆ.

Published: 18th July 2022 06:32 PM  |   Last Updated: 18th July 2022 06:42 PM   |  A+A-


Devle devle from Gaalipata 2, an instant hit

ದೇವ್ಲೆ ದೇವ್ಲೇ ಹಾಡು

Posted By : srinivasamurthy
Source : The New Indian Express

ಬೆಂಗಳೂರು: ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಚಿತ್ರದ ಮೂರನೇ ಹಾಡು ಬಿಡುಗಡೆಯಾದ ಕೆಲವೇ ದಿನಗಳ ಅಂತರದಲ್ಲಿ ಹಿಟ್ ಲಿಸ್ಟ್ ಸೇರಿದೆ.

ಹೌದು.. ಗಾಳಿಪಟ 2 ಚಿತ್ರದ ಮೂರನೇ ಹಾಡು 'ದೇವ್ಲೆ ದೇವ್ಲೆ' ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಕೇಳುಗರ ಮೆಚ್ಚುಗೆಗೆ ಪಾತ್ರವಾಗಿ ಹಿಟ್ ಲಿಸ್ಟ್ ಸೇರಿದೆ. ದೇವ್ಲೆ ದೇವ್ಲೆ ನಿರ್ದೇಶಕ ಯೋಗರಾಜ್ ಭಟ್ ಬರೆದ ಚಮತ್ಕಾರಿ ಸಾಹಿತ್ಯವನ್ನು ಹೊಂದಿದ್ದು, ಈ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದು, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.

ಹಾಡಿನ ಯಶಸ್ಸಿನ ಕುರಿತ ಮಾಧ್ಯಮ ಸಂವಾದದಲ್ಲಿ ಖುಷಿ ಹಂಚಿಕೊಂಡ ನಿರ್ದೇಶಕ ಯೋಗರಾಜ್ ಭಟ್, ಲಾಕ್‌ಡೌನ್ ಸಮಯದಲ್ಲಿ ದೇವ್ಲೆ ದೇವ್ಲೆಯನ್ನು ಚಿತ್ರೀಕರಿಸಲಾಗಿತ್ತು. ಇಡೀ ಸಿಬ್ಬಂದಿ ಕಝಾಕಿಸ್ತಾನ್‌ಗೆ ಪ್ರಯಾಣಿಸಿ ಹಿಮಭರಿತ ಹಿನ್ನೆಲೆ ಮತ್ತು ತಂಪಾದ ವಾತಾವರಣದಲ್ಲಿ ಈ ಹಾಡನ್ನು ಚಿತ್ರೀಕರಿಸಿದ್ದೇವೆ. ಹಾಡನ್ನು ಯಶಸ್ವಿಯಾಗಿ ಚಿತ್ರೀಕರಿಸಿದ ಕೀರ್ತಿ ನಿರ್ಮಾಪಕ ರಮೇಶ್ ರೆಡ್ಡಿ ಅವರಿಗೆ ಸಲ್ಲಬೇಕು ಎಂದರು.

ಗಾಳಿಪಟ 2 ನಾಯಕ ಗಣೇಶ್ ಅವರು ಮಾತನಾಡಿ, ತನಗೆ ಆರಂಭದಲ್ಲಿ ದೇವ್ಲೆ ದೇವ್ಲೆ ಬಗ್ಗೆ ಭಯವಿತ್ತು, ಆದರೆ ಈಗ ಅದು ರಿಪೀಟ್ ಮೋಡ್‌ನಲ್ಲಿದೆ. ವಿಜಯಪ್ರಕಾಶ್ ಅವರ ಧ್ವನಿ, ಅರ್ಜುನ್ ಜನ್ಯ ಅವರ ಸಂಗೀತ, ಸಂತೋಷ್ ರೈ ಪಾತಾಜೆ ಅವರ ಕ್ಯಾಮೆರಾ ವರ್ಕ್ ಮತ್ತು ಡ್ಯಾನ್ಸ್ ಮಾಸ್ಟರ್ ಧನು ಅವರ ನೃತ್ಯ ಸಂಯೋಜನೆಗಾಗಿ ನಾನು ದೇವ್ಲೆ ದೇವ್ಲೆಯ ಅಭಿಮಾನಿಯಾಗಿದ್ದೇನೆ ಮತ್ತು ಅವರು ಈ ಪೆಪ್ಪಿ ಟ್ರ್ಯಾಕ್ ಅನ್ನು ಹೊರತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಖುಷಿ ಹಂಚಿಕೊಂಡರು.

ಇದನ್ನೂ ಓದಿ: ಗಾಳಿಪಟ-2 ಸಿನಿಮಾ ಬರಲು ಸುಧಾ ಮೂರ್ತಿ ಕಾರಣ: ನಟ ಅನಂತ್ ನಾಗ್

ಈ ಸಂದರ್ಭದಲ್ಲಿ ಮಾತನಾಡಿದ ಗಾಯಕ ವಿಜಯ್ ಪ್ರಕಾಶ್, ಯೋಗರಾಜ್ ಭಟ್ ಮತ್ತು ಗಣೇಶ್ ಜೊತೆಗಿನ ತಮ್ಮ ಪ್ರಯಾಣ ಗಾಳಿಪಟದಲ್ಲಿ ‘ಕವಿತೆ ಕವಿತೆ...’ ಮೂಲಕ ಆರಂಭಗೊಂಡಿದ್ದು, ಅದರ ಮುಂದುವರಿದ ಭಾಗಕ್ಕೂ ಕೈ ಜೋಡಿಸಿರುವುದು ಸಂತಸ ತಂದಿದೆ. ಯೋಗರಾಜ್ ಭಟ್ ಅವರಿಗಾಗಿ ನನ್ನ ಹಾಡುಗಳು ಯಾವಾಗಲೂ ಚಾರ್ಟ್‌ಬಸ್ಟರ್‌ಗಳಾಗಿರುತ್ತವೆ. ಇದು ಕೂಡ ಅದೇ ಪಟ್ಟಿಗೆ ಸೇರುತ್ತದೆ ಎಂದು ಭಾವಿಸುತ್ತೇನೆ ಎಂದರು.

ಲ ಕಾರದಲ್ಲಿ ಈ ಹಾಡನ್ನು ಹಾಡುವುದು ಕಷ್ಟ ಅಂದುಕೊಂಡೆ. ಬಳಿಕ ಅಭ್ಯಾಸ ಮಾಡಿದೆ. ಅರ್ಧ ಗಂಟೆಯಲ್ಲಿ "ದೇವ್ಲೆ ದೇವ್ಲೆ" ಹಾಡು ಹಾಡಿದೆ. ಈ ಹಾಡು ಮಾಡಿದಾಗ ಲ ಕಾರ ಇರಲಿಲ್ಲ. ಮೊದಲು ರ ಕಾರ ಇತ್ತು. ರ ಕಾರದ ಹಾಡು ಅಷ್ಟು ಮಜಾ ಇಲ್ಲ ಅಂದೆ. ಆಗ ಯೋಗರಾಜ್ ಸರ್, ರ ಕಾರಗಳನ್ನು ತೆಗೆದು ಲ ಕಾರ ಮಾಡು ಅಂದರು. ಹಾಗೆ ಮಾಡಿದಾಗ ಈ ಹಾಡು ತುಂಬಾ ಹಿಡಿಸಿತು ಎಂದು ವಿಜಯ್ ಪ್ರಕಾಶ್ ಹೇಳಿದರು.

ಇದನ್ನೂ ಓದಿ: ಬಹುನಿರೀಕ್ಷಿತ 'ಗಾಳಿಪಟ-2' ಚಿತ್ರ ಆಗಸ್ಟ್ 12ಕ್ಕೆ ಬಿಡುಗಡೆ

ಇನ್ನು ನಿರ್ಮಾಪಕ ರಮೇಶ್ ರೆಡ್ಡಿ ಮಾತನಾಡಿ, ಈ ಹಾಡಿನ‌ ಚಿತ್ರೀಕರಣ ನೋಡಲು ಕಜಾಕಿಸ್ತಾನಕ್ಕೆ ಹೋಗಿದ್ದೆ. ಅದೇ ಮೊದಲ ಬಾರಿಗೆ ನಾನು ಅಂತಾರಾಷ್ಟ್ರೀಯ ವಿಮಾನ ಹತ್ತಿದ್ದು, ಅಂತಹ ಚಳಿಯಲ್ಲಿ ಕೆಲಸ ಮಾಡಿದ್ದ ಚಿತ್ರ ತಂಡಕ್ಕೆ ಧನ್ಯವಾದ ಎಂದು ಹೇಳಿದರು.

ಗಾಳಿಪಟ 2 ಆಗಸ್ಟ್ 12 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದ್ದು, ಸೂರಜ್ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಿಸಲಾಗಿರುವ ಈ ಚಿತ್ರದಲ್ಲಿ ಅನಂತ್ ನಾಗ್, ದಿಗಂತ್, ಪವನ್ ಕುಮಾರ್, ಶರ್ಮಿಳಾ ಮಾಂಡ್ರೆ, ಸಂಯುಕ್ತಾ ಮೆನನ್ ಮತ್ತು ವೈಭವಿ ಶಾಂಡಿಲ್ಯ, ಸುಧಾ ಬೆಳವಾಡಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಚಿತ್ರದಲ್ಲಿ ನಿಶ್ವಿಕಾ ನಾಯ್ಡು ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  


Stay up to date on all the latest ಸಿನಿಮಾ ಸುದ್ದಿ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp