social_icon

ರಮೇಶ್ ಅರವಿಂದ್ ಅಭಿನಯದ 'ಶಿವಾಜಿ ಸುರತ್ಕಲ್-2 ಹೊಸ ಫೋಸ್ಟರ್ ಬಿಡುಗಡೆ

ನಟ ರಮೇಶ್ ಅರವಿಂದ್ ನಟನೆಯ' ಶಿವಾಜಿ ಸುರತ್ಕಲ್' ಚಿತ್ರದ ಎರಡನೇ ಭಾಗದ ಹೊಸ ಫೋಸ್ಟರ್ ಬಿಡುಗಡೆಯಾಗಿದೆ. 21 ದಿನಗಳ ಚಿತ್ರೀಕರಣದ ನಂತರ ಮಹಾಶಿವರಾತ್ರಿ ದಿನವಾದ ಇಂದು ಸಿನಿಮಾದ ಎರಡನೇ ಪೋಸ್ಟರ್ ನ್ನು ಚಿತ್ರ ತಂಡ ಬಿಡುಗಡೆ ಮಾಡಿದೆ.

Published: 01st March 2022 05:15 PM  |   Last Updated: 01st March 2022 05:33 PM   |  A+A-


Ramesh_Aravind1

ನಟ ರಮೇಶ್ ಅರವಿಂದ್

Posted By : Nagaraja AB
Source : Online Desk

ಬೆಂಗಳೂರು: ನಟ ರಮೇಶ್ ಅರವಿಂದ್ ನಟನೆಯ' ಶಿವಾಜಿ ಸುರತ್ಕಲ್' ಚಿತ್ರದ ಎರಡನೇ ಭಾಗದ ಹೊಸ ಫೋಸ್ಟರ್ ಬಿಡುಗಡೆಯಾಗಿದೆ. 21 ದಿನಗಳ ಚಿತ್ರೀಕರಣದ ನಂತರ ಮಹಾಶಿವರಾತ್ರಿ ದಿನವಾದ ಇಂದು ಸಿನಿಮಾದ ಎರಡನೇ ಪೋಸ್ಟರ್ ನ್ನು ಚಿತ್ರ ತಂಡ ಬಿಡುಗಡೆ ಮಾಡಿದೆ. ಕಳೆದ ಎರಡು ವರ್ಷಗಳ ಹಿಂದೆ 2020ರಲ್ಲಿ ಶಿವಾಜಿ ಸುರತ್ಕಲ್ ಸಿನಿಮಾದ ಮೊದಲ ಭಾಗ ಮಹಾಶಿವರಾತ್ರಿಯಂದೇ ತೆರೆ ಕಂಡಿತ್ತು. 

ಆಕಾಶ್ ಶ್ರೀವತ್ಸ ನಿರ್ದೇಶನದ ಶಿವಾಜಿ ಸುರತ್ಕಲ್ ಎರಡನೇ ಭಾಗದಲ್ಲೂ ರಮೇಶ್ ಅರವಿಂದ್ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಶಿವಾಜಿಯ ವೈಯಕ್ತಿಕ ಜೀವನವನ್ನು ಸಹ ಹೇಳಲಾಗುತ್ತಿದೆ. ಈ ಬಾರಿ 'ದಿ ಮಿಸ್ಟೀರಿಸ್ ಕೇಸ್ ಆಫ್ ಮಾಯಾವಿ' ಭೇದಿಸಲು ಸಜ್ಜಾಗಿದ್ದಾರೆ. ನಾಸೀರ್ ಶಿವಾಜಿ ತಂದೆ ವಿಜಯೇಂದ್ರ ಸುರತ್ಕಲ್ ಪಾತ್ರವನ್ನು ನಿಭಾಯಿಸುತ್ತಿದ್ದು, ರಮೇಶ್ ಅರವಿಂದ್ ಅವರೊಂದಿಗೆ ಪ್ರಥಮ ಬಾರಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಎಂದು ಆಕಾಶ್ ತಿಳಿಸಿದ್ದಾರೆ. 

ಇದನ್ನೂ ಓದಿ: ‘ಶಿವಾಜಿ ಸುರತ್ಕಲ್ 2’ ಚಿತ್ರದಲ್ಲಿ ರಮೇಶ್ ಅರವಿಂದ್ ತಂದೆಯಾಗಿ ಹಿರಿಯ ನಟ ನಾಜರ್

ಶಿವಾಜಿ ಮಗಳಾದ ಸಿರಿ ಸುರತ್ಕಲ್ ಕೂಡಾ ಕಾಣಿಸಿಕೊಳ್ಳಲಿದ್ದಾರೆ. ತನ್ನ ಮುದ್ದಿನ ಮಗಳನ್ನು ಚುಕ್ಕಿ ಎಂದು ಶಿವಾಜಿ ಕರೆಯುತ್ತಾರೆ. ಅಲ್ಲಿ ಶಿವಾಜಿಗೆ ಸಿಕ್ಕಿದ್ದೆಲ್ಲಿ ಎಂಬ ಪ್ರಶ್ನೆಗೂ ಈ ಚಿತ್ರದಲ್ಲಿ ಉತ್ತರ ಸಿಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.  ಸುರತ್ಕಲ್, ಮಲ್ಫೆ ಬೀಚ್, ಕಾಪು ಬೀಚ್, ಮರವಂತೆ, ಮುರ್ಡೇಶ್ವರ ಮತ್ತಿತರ ಕಡೆಗಳಲ್ಲಿ ಈಗಾಗಲೇ ಚಿತ್ರೀಕರಣ ಪೂರೈಸಲಾಗಿದೆ.

ಶಿವಾಜಿ ಸುರತ್ಕಲ್ ಎರಡನೇ ಭಾಗದಲ್ಲಿ ರಘು ರಾಮಣ್ಣಕೊಪ್ಪ, ರಾಧಿಕಾ ನಾರಾಯಣ್, ಮೇಘಾನ ಗಾಂವಕ್ಕರ್, ದೀಪಾ ಕಾಮತ್, ಶೋಭ್ ರಾಜ್ ಮತ್ತಿತರರು ನಟಿಸಿದ್ದಾರೆ.  ಈ ಚಿತ್ರಕ್ಕೆ ದರ್ಶನ್ ಅಂಬಾಟ್ ಅವರ ಛಾಯಾಗ್ರಹಣವಿದ್ದು, ನಕುಲ್  ಅಭಯಂಕರ್ ಸಂಗೀತ ಸಂಯೋಜಿಸಿದ್ದಾರೆ. ರೇಖಾ ಕೆ.ಎನ್. ಮತ್ತು ಅನುಫ್ ಗೌಡ ಅವರು ಅಂಜನಾದ್ರಿ ಸಿನಿ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 
 


Stay up to date on all the latest ಸಿನಿಮಾ ಸುದ್ದಿ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp