
ಆನೇಕಲ್ ಬಾಲರಾಜ್
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿ ಖ್ಯಾತಿಗಳಿಸಿದ್ದ ಆನೇಕಲ್ ಬಾಲರಾಜ್ ಅವರು ಭಾನುವಾರ ನಿಧನರಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಬಾಲರಾಜ್ ಅವರು ಕೊನೆಯುಸಿರೆಳೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಇದನ್ನೂ ಓದಿ: ಶಾಸಕ ಜಿ.ಟಿ.ದೇವೇಗೌಡರ 3 ವರ್ಷದ ಮೊಮ್ಮಗಳು ನಿಧನ
ಬಾಲರಾಜ್ ಅವರು ವಾಕಿಂಗ್ ಮಾಡಲು ತೆರಳುತ್ತಿದ್ದಾಗ ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಈ ವೇಳೆ ಪಾದಚಾರಿ ಮಾರ್ಗದ ಮೇಲೆ ಬಾಲರಾಜ್ ಬಿದ್ದಿದ್ದಾರೆ. ಬಳಿಕ ತಲೆಗೆ ಗಂಭೀರವಾಗಿ ಗಾಯವಾಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.
ಬಾಲರಾಜ್ ಅವರಿಗೆ 58 ವರ್ಷ ವಯಸ್ಸಾಗಿತ್ತು. ಕನ್ನಡ ಚಿತ್ರರಂಗದಲ್ಲಿ ಅನೇಕಲ್ ಬಾಲರಾಜ್ ಅವರು ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದರು. ಪ್ರೇಮ್ ನಿರ್ದೇಶನದ ‘ಕರಿಯಾ’, ಶ್ರೀನಿವಾಸ್ ಪ್ರಭು ನಿರ್ದೇಶನ ಮಾಡಿದ್ದ ‘ಕರಿಯಾ 2’, ‘ಗಣಪ’ ಸೇರಿದಂತೆ ಅನೇಕ ಸಿನಿಮಾಗಳನ್ನು ಬಾಲರಾಜ್ ನಿರ್ಮಾಣ ಮಾಡಿದ್ದರು.