ಕಾಂತಾರ ಸಿನಿಮಾದ ದೈವದ ವೇಷ ಹಾಕಿದ್ದ ಯುವತಿಯಿಂದ ಧರ್ಮಸ್ಥಳದಲ್ಲಿ ತಪ್ಪು ಕಾಣಿಕೆ

ಮೇಕಪ್​ ಆರ್ಟಿಸ್ಟ್​ ಆಗಿರುವ ಶ್ವೇತಾ ರೆಡ್ಡಿ ಕಾಂತಾರ ದೈವದ ವಿಡಿಯೋವನ್ನು ಶೂಟ್ ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ರೀತಿ ರೀಲ್ಸ್ ಪೋಸ್ಟ್ ಮಾಡಿದ್ದರು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಶ್ವೇತಾ ರೆಡ್ಡಿ
ಶ್ವೇತಾ ರೆಡ್ಡಿ
Updated on

ಬೆಂಗಳೂರು: ಮೇಕಪ್​ ಆರ್ಟಿಸ್ಟ್​ ಆಗಿರುವ ಶ್ವೇತಾ ರೆಡ್ಡಿ ಕಾಂತಾರ ದೈವದ ವಿಡಿಯೋವನ್ನು ಶೂಟ್ ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ರೀತಿ ರೀಲ್ಸ್ ಪೋಸ್ಟ್ ಮಾಡಿದ್ದರು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಕಾಂತಾರ ಚಲನ ಚಿತ್ರದಲ್ಲಿರುವ ದೈವದ ಪಾತ್ರದಂತೆ ವೇಷ ಹಾಕಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಹೈದರಾಬಾದ್‌ ಮೂಲದ ಶ್ವೇತಾ ರೆಡ್ಡಿ ಅವರು ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಸಲ್ಲಿಸಿ, ಡಾ. ಡಿ.ವೀರೇಂದ್ರ ಹೆಗ್ಗಡೆಯವರಲ್ಲಿ ಕ್ಷಮಾಪಣೆ ಕೇಳಿ ಆಶೀರ್ವಾದ ಪಡೆದಿದ್ದಾರೆ.

<strong>ಶ್ವೇತಾ ರೆಡ್ಡಿ</strong>
ಶ್ವೇತಾ ರೆಡ್ಡಿ

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶ್ವೇತಾ, ಇದನ್ನು ತಿಳಿದು ಮಾಡಿರಲಿಲ್ಲ, ಯಕ್ಷಗಾನ ಪಾತ್ರ ಮತ್ತು ಇದು ಒಂದೇ ಎಂದುಕೊಂಡಿದ್ದೆ. ಟೀಕೆಗಳು ಬಂದ ಬಳಿಕ ಬೇರೆ ಬೇರೆ ಎಂದು ತಿಳಿಯಿತು. ಸಮಸ್ತ ದೈವಾ ರಾಧಕರಲ್ಲಿ ಹಾಗೂ ಜನತೆಯಲ್ಲಿ ದಯವಿಟ್ಟು ಕ್ಷಮಿಸಿ ಎಂದು ಕೇಳಿಕೊಳ್ಳುವುದಾಗಿ ತಿಳಿಸಿದರು.

ಕಾಂತಾರ ಸಿನಿಮಾ ಸುದ್ದಿಯಾಗುತ್ತಿದ್ದಂತೆ ಅದರಲ್ಲಿ ಬಂದಂತಹ ದೈವದ ವೇಷವನ್ನು ಇಮಿಟೇಟ್ ಮಾಡಿದ ಯುವತಿ ಈಗ ಅದಕ್ಕಾಗಿ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ತಪ್ಪು ಕಾಣಿಕೆ ಒಪ್ಪಿಸಿದ್ದಾರೆ. ನಾವು ಬೆಂಗಳೂರಿನವರು, ನಮಗೇನೂ ಗೊತ್ತಿಲ್ಲ, ತುಂಬಾ ಕಷ್ಟ ಆಗಿತ್ತು. ನೆಗೆಟಿವ್ ಕಾಮೆಂಟ್ಸ್ ಬರುತ್ತಿತ್ತು. ನಾವು ಬೆಂಗಳೂರಿನವರು. ನಮಗೆ ಇದರ ಬಗ್ಗೆ ಏನೂ ಗೊತ್ತಿಲ್ಲ. ಹಾಗಾಗಿ ಮುಂದೇನೂ ಆಗಬಾರದು ಎಂದು ದೇವಸ್ಥಾನಕ್ಕೆ ಬಂದು ತಪ್ಪು ಕಾಣಿಕೆ ಹಾಕಿದ್ದೇವೆ. ನಾವು ದೈವ ಯಕ್ಷಗಾನ ಎಲ್ಲವೂ ಒಂದೇ ಎಂದು ತಿಳಿದುಕೊಂಡಿದ್ದೆವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com