ಕಿಚ್ಚ ಸುದೀಪ್ ಹೇಳಿಕೆಯಿಂದ ನನಗೆ ಆಘಾತ ಮತ್ತು ನೋವಾಗಿದೆ: ನಟ ಪ್ರಕಾಶ್ ರಾಜ್

ನಿನ್ನೆ ಬೆಳಗ್ಗೆ ನಟ ಕಿಚ್ಚ ಸುದೀಪ್‌ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಸುದ್ದಿಯಾದಾಗ 'ಇದು ಸುಳ್ಳು ಸುದ್ದಿ, ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ' ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು.
ನಟ ಪ್ರಕಾಶ್ ರಾಜ್
ನಟ ಪ್ರಕಾಶ್ ರಾಜ್

ಚೆನ್ನೈ: ನಿನ್ನೆ ಬೆಳಗ್ಗೆ ನಟ ಕಿಚ್ಚ ಸುದೀಪ್‌ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಸುದ್ದಿಯಾದಾಗ 'ಇದು ಸುಳ್ಳು ಸುದ್ದಿ, ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ' ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು.

ನಂತರ ನಿನ್ನೆ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಈ ಬಾರಿ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮತ್ತು ಅವರು ಸೂಚಿಸುವ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಕಿಚ್ಚ ಸುದೀಪ್ ಹೇಳಿಕೊಂಡರು. 

ಅದಕ್ಕೂ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ.  ಕಿಚ್ಚ ಸುದೀಪ್‌ ಹೇಳಿಕೆಯಿಂದ ನನಗೆ ಆಘಾತ ಮತ್ತು ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಈ ಬೆಳವಣಿಗೆ ಕುರಿತು ಎಎನ್‌ಐ ಮಾಧ್ಯಮ ಸಂಸ್ಥೆಗೆ ಪ್ರತಿಕ್ರಿಯಿಸಿದರುವ ನಟ ಪ್ರಕಾಶ್‌ ರಾಜ್‌ "ಕಿಚ್ಚ ಸುದೀಪ್ ಹೇಳಿಕೆಯಿಂದ ನನಗೆ ಆಘಾತ ಮತ್ತು ನೋವಾಗಿದೆ.'' ಎಂದಿದ್ದಾರೆ.

ನಿನ್ನೆ ಸುದ್ದಿಗೋಷ್ಠಿಯಲ್ಲಿ ಪ್ರಕಾಶ್ ರಾಜ್ ಅವರ ಪ್ರತಿಕ್ರಿಯೆ ಕುರಿತು ನಟ ಕಿಚ್ಚ ಅವರಲ್ಲಿ ಸುದ್ದಿಗಾರರು ಕೇಳಿದಾಗ, ನನಗೆ ಹಿರಿಯ ನಟ ಪ್ರಕಾಶ್ ರಾಜ್ ಅವರ ಮೇಲೆ ಅತೀವ ಗೌರವವಿದೆ. ಅವರೊಬ್ಬ ಉತ್ತಮ ಕಲಾವಿದ, ಅವರ ಜೊತೆ ರನ್ನ ಸಿನಿಮಾದಲ್ಲಿ ಕೆಲಸ ಮಾಡಿದ್ದೆ. ಮುಂದೆ ಕೂಡ ಅವರ ಜೊತೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com