ಬಹು ಅಂಗಾಂಗ ಹಾನಿಯಿಂದ ನಟ ಶರತ್ ಬಾಬು ಮತ್ತೆ ಆಸ್ಪತ್ರೆಗೆ ದಾಖಲು

ಕನ್ನಡದ ಅಮೃತ ವರ್ಷಿಣಿ ಸಿನಿಮಾದ ಅಭಿನಯಕ್ಕಾಗಿ ಮೆಚ್ಚುಗೆಗೆ ಪಾತ್ರವಾಗಿದ್ದ ಬಹುಭಾಷಾ ನಟ ಹಾಗೂ ಕೊನೆಯದಾಗಿ ವಸಂತ ಮುಲ್ಲೈ (2023) ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಹಿರಿಯ ನಟ ಶರತ್ ಬಾಬು ಅವರನ್ನು ಹೈದರಾಬಾದ್‌ನಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶರತ್ ಬಾಬು
ಶರತ್ ಬಾಬು

ಕನ್ನಡದ ಅಮೃತ ವರ್ಷಿಣಿ ಸಿನಿಮಾದ ಅಭಿನಯಕ್ಕಾಗಿ ಮೆಚ್ಚುಗೆಗೆ ಪಾತ್ರವಾಗಿದ್ದ ಬಹುಭಾಷಾ ನಟ ಹಾಗೂ ಕೊನೆಯದಾಗಿ ವಸಂತ ಮುಲ್ಲೈ (2023) ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಹಿರಿಯ ನಟ ಶರತ್ ಬಾಬು ಅವರನ್ನು ಹೈದರಾಬಾದ್‌ನಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟ ಬಹು ಅಂಗಾಂಗ ಹಾನಿಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಹಿಂದೆ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇತ್ತೀಚಿನ ವಾರಗಳಲ್ಲಿ ಇದೀಗ ಎರಡನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

1973 ರಲ್ಲಿ ತೆಲುಗು ಚಿತ್ರಕ್ಕೆ ಪದಾರ್ಪಣೆ ಮಾಡಿದ ಶರತ್ ಬಾಬು ಅವರು ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಯ ಹಲವಾರು ಚಲನಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಪೋಷಕ ಪಾತ್ರಗಳಲ್ಲಿ ಅತ್ಯುತ್ತಮ ನಟನೆಗಾಗಿ ಶರತ್ ಬಾಬು ಅವರಿಗೆ ಒಂಬತ್ತು ಬಾರಿ ನಂದಿ ಪ್ರಶಸ್ತಿ ಲಭಿಸಿದೆ.

ಅವರು ಶೀಘ್ರ ಗುಣಮುಖರಾಗಲಿ ಎಂದು ಗಣ್ಯರು ಸೇರಿದಂತೆ ನಾನಾ ಕಡೆಯಿಂದ ಹಾರೈಕೆಗಳು ಹರಿದು ಬರುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com