ಬೆಂಗಳೂರು: ಥಾಲ್ಯಾಂಡ್ ಪ್ರವಾಸ ಹೋಗಿದ್ದ ವೇಳೆ ಬ್ಯಾಂಕಾಕ್ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಹರಿಶ್ಚಂದ್ರ ಘಾಟ್ನಲ್ಲಿ ನಾಳೆ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.
ಇಂದು ರಾತ್ರಿ 11 ಗಂಟೆ ಸುಮಾರಿಗೆ ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿರುವ ಸಾಧ್ಯತೆ ಇದೆ. 12 ಗಂಟೆ ವೇಳೆಗೆ ಮಲ್ಲೇಶ್ವರಂನಲ್ಲಿರುವ ಅವರ ತಂದೆ ಮನೆ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಮನೆಗೆ ತಲುಪಲಿದೆ. ಬಳಿಕ ಮನೆಯ ಬಳಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಾಳೆ ಮಧ್ಯಾಹ್ನದವರೆಗೂ ಅಂತಿಮ ದರ್ಶನ ನಡೆಯಲಿದೆ.
ಇಂದು ಬೆಳಗ್ಗೆಯಿಂದಲೂ ಬ್ಯಾಂಕಾಕ್ನಲ್ಲಿ ಒಂದಷ್ಟು ಕಾನೂನಾತ್ಮಕ ಪ್ರಕ್ರಿಯೆಗಳು ನಡೆಯುತ್ತಿವೆ. ಈಗಾಗಲೇ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ನಡೆದಿದೆ. ಬಾಕಿ ಉಳಿದಿರುವ ಪ್ರಕ್ರಿಯೆಗಳು ಇಂದು ಮಧ್ಯಾಹ್ನದ ಒಳಗೆ ಮುಗಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾಂಗ್ರೆಸ್ ನಾಯಕ ಸ್ಪಂದನಾ ಚಿಕ್ಕಪ್ಪ ಬಿ.ಕೆ.ಹರಿಪ್ರಸಾದ್ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ, ಸ್ಪಂದನಾ ಅವರ ಪೊಸ್ಟ್ ಮಾರ್ಟಂ ಮುಗಿದಿದೆ. ಥೈಲಾಂಟ್ನಲ್ಲಿ ಒಂದು ಘಂಟೆಗೆ ಪ್ರೊಸಿಜರ್ ಮುಗಿಯಲಿದೆ. ಸಂಜೆ ಥೈ ಏರ್ಲೈನ್ಸ್ನಲ್ಲಿ ಮೃತದೇಹವನ್ನು ತರಲಾಗುವುದು. ರಾತ್ರಿ 11 ರ ವೇಳೆಗೆ ಮೃತದೇಹ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿದೆ. ರಾತ್ರಿಯಿಂದ ನಾಳೆ ಮಧ್ಯಾಹ್ನದವರೆಗೂ ಮಲ್ಲೇಶ್ವರಂ ರಲ್ಲಿ ಅಂತಿಮನಮನಕ್ಕೆ ಅವಕಾಶ ನೀಡಲಾಗಿದೆ. ನಾಳೆ ಮಧ್ಯಾಹ್ನ ಶ್ರೀರಾಂಪುರದ ಹರಿಶ್ಚಂದ್ರ ಘಾಟ್ನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿಸಿದರು.
Advertisement