ಮೂರ್ಖರು, ಮತಾಂಧರು ಬೊಗಳುತ್ತಾರೆ, ಕಚ್ಚುವುದಿಲ್ಲ: ಪಠಾಣ್ ಸಿನಿಮಾ ವಿರೋಧಿಗಳ ಬಗ್ಗೆ ಪ್ರಕಾಶ್ ರಾಜ್ ಟೀಕೆ

ಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಪ್ರಕಾಶ್ ರಾಜ್​, ‘ಅವರು ಪಠಾಣ್ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಅಂದುಕೊಂಡಿದ್ದರು. ಆದರೆ, ಈ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.
ಪ್ರಕಾಶ್ ರಾಜ್
ಪ್ರಕಾಶ್ ರಾಜ್
Updated on

ಪಠಾಣ್ ಸಿನಿಮಾ ರಿಲೀಸ್​ಗೂ ಮೊದಲು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಒಂದು ವರ್ಗದ ಜನರು ಆಗ್ರಹಿಸಿದ್ದರು. ಆದರೆ, ಇದು ಕೆಲಸ ಮಾಡಿಲ್ಲ. ಈ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ವಿಚಾರ ಇಟ್ಟುಕೊಂಡು ಕೆಲವರು ಬೈಕಾಟ್ ಗ್ಯಾಂಗ್​ನ ಟೀಕೆ ಮಾಡುತ್ತಿದ್ದಾರೆ ಪ್ರಕಾಶ್ ರಾಜ್ ಕೂಡ ಈ ಬಗ್ಗೆ ಮಾತನಾಡಿದ್ದಾರೆ.

ಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಪ್ರಕಾಶ್ ರಾಜ್​, ‘ಅವರು ಪಠಾಣ್ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಅಂದುಕೊಂಡಿದ್ದರು. ಆದರೆ, ಈ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮೂರ್ಖರು, ಮತಾಂಧರು ಪಠಾಣ್​ನ ಬ್ಯಾನ್ ಮಾಡಲು ಬಯಿಸಿದ್ದರು. ಅವರಿಗೆ ಮೋದಿ ಸಿನಿಮಾಗೆ 30 ಕೋಟಿ ರೂಪಾಯಿ ಕಲೆಕ್ಷನ್ ಮಾಡಿಸಲು ಸಾಧ್ಯವಾಗಿಲ್ಲ. ಅವರು ಬೊಗಳುತ್ತಾರೆ, ಕಚ್ಚುವುದಿಲ್ಲ’ ಎಂದಿದ್ದಾರೆ.

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನೂ ಪ್ರಕಾಶ್ ರಾಜ್ ಟೀಕೆ ಮಾಡಿದ್ದಾರೆ. ‘ಕಾಶ್ಮೀರ್ ಫೈಲ್ಸ್​ ನಾನ್ಸೆನ್ಸ್ ಸಿನಿಮಾ. ಅದನ್ನು ನಿರ್ಮಾಣ ಮಾಡಿದ್ದು ಯಾರು ಅನ್ನೋದು ನಿಮಗೆ ಗೊತ್ತಿದೆ. ಅಂತಾರಾಷ್ಟ್ರಿಯ ಜ್ಯೂರಿಗಳು ಚಿತ್ರವನ್ನು ತೆಗಳಿದರು. ಈ ಚಿತ್ರದ ನಿರ್ದೇಶಕ ನಮ್ಮ ಚಿತ್ರಕ್ಕೆ ಏಕೆ ಆಸ್ಕರ್ ಸಿಗುತ್ತಿಲ್ಲ ಎಂದು ಕೇಳುತ್ತಿದ್ದಾರೆ. ಇಲ್ಲಿ ನೀವು ಪ್ರೊಪೊಗಾಂಡ ಚಿತ್ರಗಳನ್ನು ಮಾಡಬಹುದು. ಈ ರೀತಿಯ ಸಿನಿಮಾಗಳನ್ನು ನಿರ್ಮಾಣ ಮಾಡಲು ಅವರು 2000 ಸಾವಿರ ಕೋಟಿ ಹೂಡಿಕೆ ಮಾಡಿದ್ದಾರೆ. ಆದರೆ, ಎಲ್ಲಾ ಬಾರಿಯೂ ಜನ್ನರು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ ಅವರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com