'ಲಂಕಾಸುರ' ಸಿನಿಮಾ ಸಾಂಗ್ ರಿಲೀಸ್ ಮಾಡಿದ ಹಿರಿಯ ನಟಿ ಮಾಲಾಶ್ರೀ ಮತ್ತು ಶೃತಿ

ವಿನೋದ್ ಪ್ರಭಾಕರ್ ಲಂಕಾಸುರ ಬಿಡುಗಡೆಗೆ ಸಿದ್ಧವಾಗುತ್ತಿದ್ದು, ಮೊದಲ ಹಾಡು ಮಾಡರ್ನ್ ಮಹಾಲಕ್ಷ್ಮಿಯನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಚಿತ್ರದ ಪ್ರಚಾರವನ್ನು ಪ್ರಾರಂಭಿಸಿತು.
ಲಂಕಾಸುರ ಸಾಂಗ್ ರಿಲೀಸ್ ಮಾಡಿದ ನಟಿಯರು
ಲಂಕಾಸುರ ಸಾಂಗ್ ರಿಲೀಸ್ ಮಾಡಿದ ನಟಿಯರು

ವಿನೋದ್ ಪ್ರಭಾಕರ್ ಲಂಕಾಸುರ ಬಿಡುಗಡೆಗೆ ಸಿದ್ಧವಾಗುತ್ತಿದ್ದು, ಮೊದಲ ಹಾಡು ಮಾಡರ್ನ್ ಮಹಾಲಕ್ಷ್ಮಿಯನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಚಿತ್ರದ ಪ್ರಚಾರವನ್ನು ಪ್ರಾರಂಭಿಸಿತು.

ನಟರಾದ ಶ್ರೀನಗರ ಕಿಟ್ಟಿ, ಶ್ರುತಿ, ನಿರ್ಮಾಪಕ ಎಂಜಿ ರಾಮಮೂರ್ತಿ ಮತ್ತು ನಿರ್ದೇಶಕ ಗುರು ದೇಶಪಾಂಡೆ ಅವರ ಸಮ್ಮುಖದಲ್ಲಿ ಖ್ಯಾತ ನಟಿ ಮಾಲಾಶ್ರೀ ಸಾಂಗ್ ಅನಾವರಣಗೊಳಿಸಿದರು.

ನಾನು ವಿನೋದ್ ಪ್ರಭಾಕರ್ ಅವರ ದೊಡ್ಡ ಅಭಿಮಾನಿ. ಅವರು ಮಾಡುವ ಸಾಹಸ ಸನ್ನಿವೇಶಗಳು ನನಗೆ ತುಂಬಾ ಇಷ್ಟ. ಟೈಗರ್ ಟಾಕೀಸ್ ಮೂಲಕ ವಿನೋದ್ ಪ್ರಭಾಕರ್ ಹಾಗೂ ನಿಶಾ ವಿನೋದ್ ಪ್ರಭಾಕರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಮಾಲಾಶ್ರೀ ಹಾರೈಸಿದರು.

ನಾನು ಪ್ರಭಾಕರ್ ಅವರ ಜೊತೆ ನಟಿಸಿದ್ದೆ. ಈಗ ‘ಮಾದೇಶ’ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರ ಜೊತೆ ನಟಿಸಿದ್ದೇನೆ.‌ ‘ಲಂಕಾಸುರ’ ಚಿತ್ರದ ಮೂಲಕ ವಿನೋದ್ ಹಾಗೂ ನಿಶಾ ನಿರ್ಮಾಪಕರು ಆಗಿದ್ದಾರೆ ಒಳ್ಳೆಯದಾಗಲಿ ಎಂದರು ನಟಿ ಶೃತಿ. ನಟ ಶ್ರೀನಗರ ಕಿಟ್ಟಿ‌, ನಿರ್ಮಾಪಕ ಎಂ.ಜಿ.ರಾಮಮೂರ್ತಿ ಸೇರಿದಂತೆ ಅನೇಕ ಗಣ್ಯರು ತಮ್ಮ ಮಾತುಗಳ ಮೂಲಕ ಶುಭ ಕೋರಿದರು.

ಇಡೀ ಚಿತ್ರತಂದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ನೋಡಿ ಹಾರೈಸಿ ಎಂದರು ನಿರ್ಮಾಪಕಿ ನಿಶಾ ವಿನೋದ್ ಪ್ರಭಾಕರ್. ಕೊರೋನ ಬರುವ ಮುಂಚೆ ರಾಘವ ಮುನಿಸ್ವಾಮಿ ಅವರು ನನಗೆ ಅಡ್ವಾನ್ಸ್ ನೀಡಿ ‘ಲಂಕಾಸುರ’ ಚಿತ್ರ ಆರಂಭಿಸಿದ್ದರು. ಆನಂತರ ಕಾರಣಾಂತರದಿಂದ ನಾವೇ ಟೈಗರ್ ಟಾಕೀಸ್ ಸಂಸ್ಥೆ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೆವು.

ಟೀಸರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ, ಲೋಗೊ ಅನಾವರಣ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾನು ಆಭಾರಿ. ನನ್ನ ಇಡೀ ಚಿತ್ರತಂಡದ ಸಹಕಾರ ಮರೆಯಲು ಸಾಧ್ಯವಿಲ್ಲ‌. ಎಲ್ಲರೂ ಇಷ್ಟಪಡುವ ಚಿತ್ರ ಮಾಡಿದ್ದೇವೆ‌. ನೋಡಿ ಪ್ರೋತ್ಸಾಹ ನೀಡಿ ಎಂದರು ನಾಯಕ ವಿನೋದ್ ಪ್ರಭಾಕರ್.

ಲಂಕಾಸುರ ಚಿತ್ರದಲ್ಲಿ ಪಾರ್ವತಿ ಅರುಣ್ ಮಹಿಳಾ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಯೋಗಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಮತ್ತು ನಟರಾದ ರವಿಶಂಕರ್ ಮತ್ತು ದೇವರಾಜ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ರಮೋದ್ ಕುಮಾರ್ ಬರೆದು ನಿರ್ದೇಶಿಸಿದ ಆಕ್ಷನ್ ಚಿತ್ರವು ಭೂಗತ ಜಗತ್ತನ್ನು ಆಧರಿಸಿದೆ ಮತ್ತು ಚಿತ್ರಕ್ಕಾಗಿ ಹೈ-ಆಕ್ಟೇನ್ ಆಕ್ಷನ್ ಸೀಕ್ವೆನ್ಸ್‌ಗಳನ್ನು ವಿನ್ಯಾಸಗೊಳಿಸಲು ತಯಾರಕರು ಐದು ಸ್ಟಂಟ್ ಕೊರಿಯೋಗ್ರಾಫರ್‌ಗಳನ್ನು ನೇಮಿಸಿಕೊಂಡಿದ್ದಾರೆ.

ಚಿತ್ರವು ನಾಲ್ಕು ಹಾಡುಗಳನ್ನು ಹೊಂದಿದೆ, ಮತ್ತು ಎಲ್ಲಾ ಹಾಡುಗಳನ್ನು ನಿರ್ದೇಶಕ ಮತ್ತು ಗೀತರಚನೆಕಾರ ಚೇತನ್ ಕುಮಾರ್ ಬರೆದಿದ್ದಾರೆ ಮತ್ತು ವಿಜಯ್ ಕೃಷ್ಣ ಸಂಗೀತ ಸಂಯೋಜಿಸಿದ್ದಾರೆ, ಅವರು ಮಾಡರ್ನ್ ಮಹಾಲಕ್ಷ್ಮಿ ಹಾಡಿಗೆ ಧ್ವನಿ ನೀಡಿದ್ದಾರೆ. ಲಂಕಾಸುರ ಚಿತ್ರಕ್ಕೆ ಸುಜ್ಞಾನ್ ಛಾಯಾಗ್ರಹಣವಿದೆ. ಚಿತ್ರವು ಈಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ನಿರ್ಮಾಪಕರು ಶೀಘ್ರದಲ್ಲೇ ಬಿಡುಗಡೆ ದಿನಾಂಕವನ್ನು ಘೋಷಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com