ಬಿಎಸ್‌ವೈ, ಸಚಿವ ಕೆ.ಸುಧಾಕರ್ ನಟಿಸಿರುವ ತನುಜಾ ಸಿನಿಮಾ ಫೆಬ್ರುವರಿ 3 ರಂದು ಬಿಡುಗಡೆ

ತನುಜಾ ಸಿನಿಮಾ ಪ್ರಾರಂಭವಾದಾಗಿನಿಂದಲೂ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದಂತ ಚಿತ್ರ. ಇದು ಫೆಬ್ರುವರಿ 3 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ರಾಜ್ಯ ಪ್ರಶಸ್ತಿ ವಿಜೇತ ಹರೀಶ್ ಎಂಡಿ ಹಳ್ಳಿ ನಿರ್ದೇಶನದ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ.
ತನುಜಾ ಚಿತ್ರದ ಪೋಸ್ಟರ್
ತನುಜಾ ಚಿತ್ರದ ಪೋಸ್ಟರ್
Updated on

ತನುಜಾ ಸಿನಿಮಾ ಪ್ರಾರಂಭವಾದಾಗಿನಿಂದಲೂ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದಂತ ಚಿತ್ರ. ಇದು ಫೆಬ್ರುವರಿ 3 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ರಾಜ್ಯ ಪ್ರಶಸ್ತಿ ವಿಜೇತ ಹರೀಶ್ ಎಂಡಿ ಹಳ್ಳಿ ನಿರ್ದೇಶನದ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ.

ಈ ಕಥೆಯು ರೈತನ ಮಗಳಾದ ತನುಜಾಳ ಪ್ರಯಾಣ, ಸಾಂಕ್ರಾಮಿಕದ ಸಮಯದಲ್ಲಿ ನೀಟ್ ಪರೀಕ್ಷೆಯನ್ನು ಬರೆಯಲು ಅವಳ ಹೋರಾಟ ಮತ್ತು ಶಸ್ತ್ರಚಿಕಿತ್ಸಕಿಯಾಗುವ ಅವಳ ಕನಸಿನ ಸುತ್ತ ಸುತ್ತುತ್ತದೆ. ಕಳೆದ ಡಿಸೆಂಬರ್‌ನಲ್ಲಿ ಬಿಡುಗಡೆಯಾದ ಚಿತ್ರದ ಟ್ರೈಲರ್‌ಗೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಕುತೂಹಲವೆಂದರೆ, ಈ ಚಿತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಂತಹ ನಿಜ ಜೀವನದ ರಾಜಕಾರಣಿಗಳು ಮೊದಲ ಬಾರಿಗೆ ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರಲ್ಲಿ ಸಚಿವ ಡಾ. ಕೆ. ಸುಧಾಕರ್ ಮತ್ತು ಖ್ಯಾತ ಪತ್ರಕರ್ತ ವಿಶ್ವೇಶ್ವರ ಭಟ್ ಕೂಡ ಇದ್ದಾರೆ. ನೀಟ್ ಪರೀಕ್ಷೆ ಬರೆಯಲು ತನುಜಾಗೆ ಸಹಾಯ ಮಾಡುವ ಲೇಖನವನ್ನು ಭಟ್ಟರು ಬರೆದರು.

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಸಪ್ತ ಪಾವೂರು ಈ ಚಿತ್ರದಲ್ಲಿಯೂ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ರಾಜೇಶ್ ನಟರಂಗ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಪ್ರದ್ದ್ಯೋತ್ತನ್ ಸಂಗೀತ ಸಂಯೋಜಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com