ಜನರ ಭಾವನೆಗಳಿಗೆ ನೋವಾಗಿದೆ, ಬೇಷರತ್ ಕ್ಷಮೆಯಾಚಿಸುತ್ತೇನೆ: 'ಆದಿ ಪುರುಷ್' ಚಿತ್ರ ಸಂಭಾಷಣೆಕಾರ ಮನೋಜ್

ಆದಿಪುರುಷ್ ಸಿನಿಮಾದಲ್ಲಿರುವ ತಪ್ಪನ್ನು ಒಪ್ಪಿಕೊಂಡಿರುವ ಚಿತ್ರದ ಸಂಭಾಷಣೆಕಾರ ಮನೋಜ್​ ಮುಂತಾಶಿರ್​ ಶುಕ್ಲಾ ಅವರು, ವಿವಾದಾತ್ಮಕ ಡೈಲಾಗ್​ ಮೂಲಕ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕೆ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.
ಮನೋಜ್​ ಮುಂತಾಶಿರ್​ ಶುಕ್ಲಾ
ಮನೋಜ್​ ಮುಂತಾಶಿರ್​ ಶುಕ್ಲಾ
Updated on

ಮುಂಬೈ: ಆದಿಪುರುಷ್ ಸಿನಿಮಾದಲ್ಲಿರುವ ತಪ್ಪನ್ನು ಒಪ್ಪಿಕೊಂಡಿರುವ ಚಿತ್ರದ ಸಂಭಾಷಣೆಕಾರ ಮನೋಜ್​ ಮುಂತಾಶಿರ್​ ಶುಕ್ಲಾ ಅವರು, ವಿವಾದಾತ್ಮಕ ಡೈಲಾಗ್​ ಮೂಲಕ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕೆ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಆದಿಪುರುಷ ಸಿನಿಮಾದಿಂದ ಜನರ ಭಾವನೆಗಳಿಗೆ ಧಕ್ಕೆಯಾಗಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ನಾನು ನನ್ನ ಎರಡೂ ಕೈಗಳನ್ನು ಮುಗಿದು ಬೇಷರತ್ ಕ್ಷಮೆಯಾಚಿಸುತ್ತೇನೆ. ಪ್ರಭು ಬಜರಂಗ ಬಲಿ ನಮ್ಮನ್ನು ಒಗ್ಗೂಡಿಸಲಿ ಮತ್ತು ನಮ್ಮ ಪವಿತ್ರ ಸನಾತನ ಹಾಗೂ ನಮ್ಮ ಮಹಾನ್ ರಾಷ್ಟ್ರದ ಸೇವೆ ಮಾಡಲು ನಮಗೆ ಶಕ್ತಿಯನ್ನು ನೀಡಲಿ ಎಂದು ಹೇಳಿದ್ದಾರೆ.

ಮನೋಜ್ ಅವರು ಕ್ಷಮೆಯಾಚಿದ್ದನ್ನು ನೆಟ್ಟಿಗರು ಒಪ್ಪಿಕೊಂಡಿಲ್ಲ. ಈಗಲೂ ಅವರ ವಿರುದ್ಧ ತೀವ್ರವಾಗಿ ಕಿಡಿಕಾರುತ್ತಿದ್ದಾರೆ.

ಕ್ಷಮೆ ಕೇಳಲು ತುಂಬಾ ತಡವಾಯಿತು ಎಂದಿದ್ದಾರೆ. ಸಿನಿಮಾ ಬಿಡುಗಡೆಯಾಗಿ ಅದರ ಪ್ರಭಾವ ಕಡಿಮೆಯಾದ ಬಳಿಕ ಕ್ಷಮೆಯಾಚಿಸುತ್ತಿದ್ದಾರೆ. ಈಗಾಗಲೇ ಸಾಕಷ್ಟು ಮಂದಿಯ ಭಾವನೆಗಳಿಗೆ ನೋವಾಗಿದೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಆದಿಪುರುಷ ಸಿನಿಮಾವನ್ನು ಓಂ ರಾವರ್​ ಅವರು ನಿರ್ದೇಶನ ಮಾಡಿದ್ದಾರೆ. ಮಹಾಕಾವ್ಯ ರಾಮಾಯಣ ಆಧಾರಿತ ಸಿನಿಮಾ ಆಗಿದ್ದು, ಭಾರೀ ಬಜೆಟ್​ನೊಂದಿಗೆ ಸಿನಿಮಾವನ್ನು ಯುವಿ ಕ್ರಿಯೇಷನ್ಸ್, ಪೀಪಲ್ಸ್ ಮೀಡಿಯಾ ಫ್ಯಾಕ್ಟರಿ ನಿರ್ಮಾಣ ಮಾಡಿದೆ.

ಪ್ಯಾನ್​ ಇಂಡಿಯಾ ಸೂಪರ್​ಸ್ಟಾರ್​ ಪ್ರಭಾಸ್​ ರಾಮನ ಪಾತ್ರದಲ್ಲಿ, ನಟಿ ಕೃತಿ ಸನೋನ್​ ಸೀತೆಯ ಪಾತ್ರದಲ್ಲಿ, ಸನ್ನಿ ಸಿಂಗ್​ ಲಕ್ಷ್ಮಣನ ಪಾತ್ರದಲ್ಲಿ ಹಾಗೂ ಸೈಫ್​ ಅಲಿಖಾನ್​ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ.

ವಿವಾದಾತ್ಮಕ ಡೈಲಾಗ್ಸ್​, ತಿರುಚಿದ ಚಿತ್ರಕತೆ ಮತ್ತು ಕಳಪೆ ಗ್ರಾಫಿಕ್ಸ್​ ಕಾರಣದಿಂದಾಗಿ ಈ ಸಿನಿಮಾ ಭಾರೀ ಟೀಕೆಗೆ ಗುರಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com