ಡೆಡ್ಲಿ ಸೋಮ ಖ್ಯಾತಿಯ ನಟ ಆದಿತ್ಯ ಸಿನಿಮಾಗೆ ಕಿರುತೆರೆಯ ಖ್ಯಾತ ನಟಿ ರಂಜನಿ ರಾಘವನ್ ನಾಯಕಿ!

ಡೆಡ್ಲಿ ಸೋಮ ಸಿನಿಮಾ ಖ್ಯಾತಿಯ ಆದಿತ್ಯ ಅವರು ತಮ್ಮ ಮುಂದಿನ ಯೋಜನೆ ಸಸ್ಪೆನ್ಸ್ ಥ್ರಿಲ್ಲರ್‌ಗೆ ಸಹಿ ಹಾಕಿದ್ದಾರೆ. ಇನ್ನೂ ಹೆಸರಿಡದ ಚಿತ್ರದ ಚಿತ್ರೀಕರಣವನ್ನು ನಟ ಸದ್ದಿಲ್ಲದೆ ಪ್ರಾರಂಭಿಸಿದ್ದಾರೆ. ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಿಶೋರ್ ಮೇಗಳಮನೆ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. 
ಆದಿತ್ಯ - ರಂಜನಿ ರಾಘವನ್
ಆದಿತ್ಯ - ರಂಜನಿ ರಾಘವನ್

ಡೆಡ್ಲಿ ಸೋಮ ಸಿನಿಮಾ ಖ್ಯಾತಿಯ ಆದಿತ್ಯ ಅವರು ತಮ್ಮ ಮುಂದಿನ ಯೋಜನೆ ಸಸ್ಪೆನ್ಸ್ ಥ್ರಿಲ್ಲರ್‌ಗೆ ಸಹಿ ಹಾಕಿದ್ದಾರೆ. ಇನ್ನೂ ಹೆಸರಿಡದ ಚಿತ್ರದ ಚಿತ್ರೀಕರಣವನ್ನು ನಟ ಸದ್ದಿಲ್ಲದೆ ಪ್ರಾರಂಭಿಸಿದ್ದಾರೆ. ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಿಶೋರ್ ಮೇಗಳಮನೆ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಅಲ್ಲದೆ, ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸಹ ಬರೆದಿದ್ದಾರೆ.

ಈ ಯೋಜನೆಗೆ ಹಣ ಹೂಡಲು ಹೂಡಿಕೆದಾರರ ಗುಂಪು ಒಟ್ಟಾಗಿ ಬರುತ್ತಿದ್ದು, ಕೇವಲ ಹದಿನೇಳು ದಿನಗಳಲ್ಲಿ ಚಿಕ್ಕಮಗಳೂರು ಮತ್ತು ಬೆಂಗಳೂರಿನಲ್ಲಿ ಕೆಲವು ಪ್ರಮುಖ ದೃಶ್ಯಗಳ ಚಿತ್ರೀಕರಣವನ್ನು ಈಗಾಗಲೇ ತಂಡವು ಪೂರ್ಣಗೊಳಿಸಿದೆ.

ಪುಟ್ಟಗೌರಿ ಮದುವೆ, ಕನ್ನಡತಿ ಮುಂತಾದ ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯರಾಗಿರುವ ರಂಜನಿ ರಾಘವನ್ ಅವರು ಇದೇ ಮೊದಲ ಬಾರಿಗೆ ಆದಿತ್ಯ ಅವರೊಂದಿಗೆ ನಾಯಕಿಯಾಗಿ ತೆರೆಹಂಚಿಕೊಳ್ಳುತ್ತಿದ್ದಾರೆ. 

ಚಿತ್ರಕ್ಕೆ ಶಶಾಂಕ್ ಶೇಷಗಿರಿ ಸಂಗೀತ ನೀಡಲಿದ್ದು, ಉದಯ ಲೀಲಾ ಅವರ ಛಾಯಾಗ್ರಹಣವಿದೆ. ಅರ್ಜುನ್ ಕಿಟ್ಟು ಸಂಕಲನದ ಹೊಣೆ ಹೊತ್ತಿದ್ದಾರೆ. ತಾರಾಗಣದಲ್ಲಿ ಶಿವಮಣಿ, ಅಶ್ವಿನ್ ಹಾಸನ್, ಕರಿಸುಬ್ಬು ಮತ್ತು ಇತರರು ಇದ್ದಾರೆ. ಚಿತ್ರವು ಚಿತ್ರೀಕರಣದ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಚಿತ್ರದ ಶೀರ್ಷಿಕೆ ಮತ್ತು ಇತರ ವಿವರಗಳನ್ನು ಚಿತ್ರತಂಡ ಬಹಿರಂಗಪಡಿಸಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com