ಚಂದನವನದಲ್ಲಿ ಬರ್ತಿದೆ ಮಲೆನಾಡ ಸೊಗಡಿನ ಸಿನಿಮಾ 'ಕೆರೆಬೇಟೆ'; ಗೌರಿ ಶಂಕರ್ ನಾಯಕ

ಐದು ವರ್ಷಗಳ ವಿರಾಮದ ನಂತರ ನಟ ಗೌರಿ ಶಂಕರ್ ಅವರು ರಾಜ್ ಗುರು ನಿರ್ದೇಶನದ 'ಕೆರೆಬೇಟೆ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಮರಳುತ್ತಿದ್ದಾರೆ. ಚಿತ್ರವನ್ನು ಮಲೆನಾಡಿನ ಸುಂದರವಾದ ಸ್ಥಳದಲ್ಲಿ ಚಿತ್ರೀಕರಿಸಲಾಗಿದೆ. 
ಗೌರಿ ಶಂಕರ್
ಗೌರಿ ಶಂಕರ್
Updated on

ಐದು ವರ್ಷಗಳ ವಿರಾಮದ ನಂತರ ನಟ ಗೌರಿ ಶಂಕರ್ ಅವರು ರಾಜ್ ಗುರು ನಿರ್ದೇಶನದ 'ಕೆರೆಬೇಟೆ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಮರಳುತ್ತಿದ್ದಾರೆ. ಚಿತ್ರವನ್ನು ಮಲೆನಾಡಿನ ಸುಂದರವಾದ ಸ್ಥಳದಲ್ಲಿ ಚಿತ್ರೀಕರಿಸಲಾಗಿದೆ. ಇದುವೇ ಚಿತ್ರವನ್ನು ವಿಭಿನ್ನ ಮತ್ತು ವಿಶೇಷವಾಗಿಸಿದೆ. ಮಲೆನಾಡು ತನ್ನ ಸಾಂಪ್ರದಾಯಿಕ ಮೀನುಗಾರಿಕೆ ಅಭ್ಯಾಸಗಳಿಗೆ ಹೆಸರುವಾಸಿಯಾಗಿದ್ದು, ಇದುವೇ ಚಿತ್ರಕ್ಕೆ ತಿರುವು ನೀಡುತ್ತದೆ. 

ಶೀರ್ಷಿಕೆ ಪೋಸ್ಟರ್ ಮೂಲಕ ಚಿತ್ರತಂಡ ಬಹಿರಂಗಪಡಿಸಿದಂತೆ ಸಿನಿಮಾ ಹಳೆಯ ಮೀನುಗಾರಿಕೆ ವಿಧಾನಗಳ ಮೇಲೆ ಕೇಂದ್ರೀಕರಿಸುವ ಗ್ರಾಮೀಣ ಭಾಗದಲ್ಲಿ ನಡೆಯುವ ಕಥಾಹಂದರವನ್ನು ಹೊಂದಿದೆ ಎಂಬುದನ್ನು ತಿಳಿಸುತ್ತದೆ.

ಸಂಪೂರ್ಣ ಶಿವಮೊಗ್ಗದಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರ ಮುಂದಿನ ವರ್ಷದ ಆರಂಭದಲ್ಲಿ ತೆರೆಗೆ ಬರಲಿದೆ. ಈ ಯೋಜನೆ ಮೂಲಕ ನಟ ಗೌರಿ ಶಂಕರ್ ಅವರು ಜೈ ಶಂಕರ್ ಪಟೇಲ್ ಜೊತೆಗೂಡಿ ನಿರ್ಮಾಪಕರಾಗಿಯೂ ಜವಾಬ್ದಾರಿಯನ್ನು ಹೊತ್ತಿದ್ದಾರೆ.
ಕೆರೆಬೇಟೆಗೆ ಗಗನ್ ಬದರಿಯಾ ಸಂಗೀತ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com