ರಕ್ಷಿತ್ ಶೆಟ್ಟಿ ಅವರ ಇತ್ತೀಚಿನ ಕನ್ನಡ ಚಿತ್ರ 'ಸಪ್ತ ಸಾಗರದಾಚೆ ಎಲ್ಲೋ' ಎಲ್ಲೆಡೆಯಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ತಮಿಳುನಾಡು ಮುಖ್ಯಮಂತ್ರಿ ಪುತ್ರ, ನಟ-ರಾಜಕಾರಣಿ ಉದಯನಿಧಿ ಸ್ಟಾಲಿನ್ ಕೂಡ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಸಹೋದರ ರಕ್ಷಿತ್ ಶೆಟ್ಟಿ! ನಿಮ್ಮ ಇತ್ತೀಚಿನ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ತುಂಬಾ ಚೆನ್ನಾಗಿದೆ! ಅತ್ಯುತ್ತಮ ಚಲನಚಿತ್ರ ನಿರ್ಮಾಣ! ಇಡೀ ತಂಡಕ್ಕೆ ಅಭಿನಂದನೆಗಳು! ಮುಂದಿನ ಭಾಗಕ್ಕಾಗಿ ಕಾಯುತ್ತಿದ್ದೇನೆ' ಎಂದು ಬರೆದಿದ್ದಾರೆ.
ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಎಲ್ಲೋ ಎರಡು ಭಾಗಗಳಲ್ಲಿ ತಯಾರಾಗಿದೆ. ಎರಡನೇ ಭಾಗವು ಅಕ್ಟೋಬರ್ 20ರಂದು ಬಿಡುಗಡೆಯಾಗಲಿದೆ. ರಕ್ಷಿತ್ ಶೆಟ್ಟಿ ಹೊರತುಪಡಿಸಿ, ಚಿತ್ರದಲ್ಲಿ ರುಕ್ಮಿಣಿ ವಸಂತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಉಧಯನಿಧಿ ಸ್ಟಾಲಿನ್ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿರುವ ನಿರ್ದೇಶಕ ಹೇಮಂತ್ ರಾವ್, ಧನ್ಯವಾದಗಳು ಸರ್ ಎಂದಿದ್ದಾರೆ.
ಚಿತ್ರವು ಸೆಪ್ಟೆಂಬರ್ 1 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚಿತ್ರಕ್ಕೆ ಹಲವರು ಈಗಾಗಲೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Advertisement