ಬ್ರಿಟಿಷರ ಕಾಲದಿಂದಲೂ ರಾಜ್ಯಕ್ಕೆ ಅನ್ಯಾಯ, ಅವರಿಂದಲೇ ತಮಿಳುನಾಡಿಗೆ ಹೆಚ್ಚು ನೀರು ಸಿಗುವ ಅವ್ಯವಸ್ಥೆ: ಅನಂತ್ ನಾಗ್

ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ.
ಅನಂತ್ ನಾಗ್
ಅನಂತ್ ನಾಗ್
Updated on

ಬೆಂಗಳೂರು: ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ. ಕರ್ನಾಟಕ ಇದೀಗ ಕಠಿಣ ನಿಲುವು ತೆಗದುಕೊಳ್ಳಬೇಕಾಗಿದೆ ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದಾರೆ.

ಕಾವೇರಿ ಬಿಕ್ಕಟ್ಟಿನ ಸಂಬಂಧ ವಿಡಿಯೊಂದರಲ್ಲಿ ಮಾತನಾಡಿರುವ ಅನಂತ್ ನಾಗ್, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯದ ಶಾಸಕರು, ಸಂಸದರು ಒಗ್ಗಟ್ಟಾಗಿ ನಿಂತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮಳೆ ಕಡಿಮೆ ಇದ್ದ ಸಂದರ್ಭದಲ್ಲಿ ಎಂದಿನಂತೆ ತಮಿಳುನಾಡು ಕಾವೇರಿ ವಿವಾದ ಆರಂಭಿಸಿದೆ. ಇದನ್ನು ಸುಮಾರು 60 ವರ್ಷದಿಂದ ನೋಡಿಕೊಂಡು ಬಂದಿದ್ದೇವೆ. ಅಲ್ಲಿ ಅಧಿಕಾರಕ್ಕೆ ಬರುವುದು ಕೇವಲ ಡಿಎಂಕೆ ಸರ್ಕಾರಗಳೇ. ಕರ್ನಾಟಕ ಸರಿಯಾಗಿ ಕಾವೇರಿ ನೀರು ಬಿಡುತ್ತಿಲ್ಲ ಎನ್ನುವ ಭಾವನೆಯನ್ನು ಅಲ್ಲಿನ ಜನರಿಗೆ ಅವರು ತಂದಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕ ಎಂದರೆ ಪಾಕಿಸ್ತಾನ, ಶ್ರೀಲಂಕಾ ಅಂದುಕೊಂಡಿದ್ದಾರೆ. ಯುದ್ಧಕ್ಕೆ ನಿಂತುಕೊಂಡಂತೆ ಅವರ ನಡೆಯಿದೆ. ಮಾತುಕತೆಯಲ್ಲಿ ಬಗೆಹರಿಸಲು ಅವರಿಗೆ ಇಷ್ಟವಿಲ್ಲ. ಅವರೆಲ್ಲರೂ ಒಗ್ಗಟ್ಟಾಗಿ ಕೇಂದ್ರ ಸರ್ಕಾರಕ್ಕೆ ಹೋಗಿ ಕಾವೇರಿ ಸಮಸ್ಯೆಯನ್ನು ಪ್ರತಿನಿಧಿಸುತ್ತಾರೆ. ನಮ್ಮವರು ಅಷ್ಟೇ ಬಲದಿಂದ ಹೋಗಿ ಪ್ರತಿನಿಧಿಸಿದ್ದು ಕೇಳಿಬರುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಕಾವೇರಿ ನೀರು ಅವರಿಗೆ ಕುಡಿಯಲು ಅಲ್ಲ ಬದಲಾಗಿ ಕೈಗಾರಿಕೆಗಳಿಗೆ ಹಾಗೂ ಕೃಷಿಗೆ ಬಳಕೆಗೆ, ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲುವ ಸಮಯ ಬಂದಿದೆ. ನಮ್ಮ ಎಲ್ಲ ಶಾಸಕರು, ಸಂಸದರು ಒಗ್ಗಟ್ಟಿನಿಂದ ನಿಂತುಕೊಂಡು ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು. ಈ ಕುರಿತು ದಿಟ್ಟ ನಿಲುವು ತಾಳಬೇಕು ಎಂದು ಅನಂತನಾಗ್‌ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com