'ಪೆಪೆ' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿರುವ ವಿನಯ್ ರಾಜ್ಕುಮಾರ್ ಅವರ ಮತ್ತೊಂದು ಕುತೂಹಲಕಾರಿ ಸಿನಿಮಾ 'ಅಂದೊಂದಿತ್ತು ಕಾಲ' ಕೂಡ ತೆರೆಗೆ ಬರಲು ಸಜ್ಜಾಗಿದೆ. ಕೀರ್ತಿ ಕುಚೇಲ ನಿರ್ದೇಶನದ ಮತ್ತು 90ರ ದಶಕದಲ್ಲಿ ನಡೆಯುವ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ‘ಅಂದೊಂದಿತ್ತು ಕಾಲ’ ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ ಎಂದು ಚಿತ್ರತಂಡ ತಿಳಿಸಿದೆ. A2 ಮ್ಯೂಸಿಕ್ ಕಂಪನಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ.
ಇದು ಹೊಸ ಹುರುಪನ್ನು ತುಂಬುತ್ತದೆ ಎಂದಿರುವ ನಿರ್ದೇಶಕರು, ಚಿತ್ರದ ಕೆಲವು ಹೊಸ ಸ್ಟಿಲ್ಗಳನ್ನು ಸಹ ಇದೇ ವೇಳೆ ಹಂಚಿಕೊಂಡಿದ್ದಾರೆ.
ಚಿತ್ರಕ್ಕೆ ವಿ ರಾಘವೇಂದ್ರ ಅವರು ಸಂಗೀತ ಸಂಯೋಜಿಸಿದ್ದು, ಡಾ. ವಿ ನಾಗೇಂದ್ರ ಪ್ರಸಾದ್ ಮತ್ತು ಧನಂಜಯ್ ರಂಜನ್ ಅವರು ಸಾಹಿತ್ಯ ಬರೆದಿದ್ದಾರೆ. ಪ್ರತಿಭಾವಂತ ಗಾಯಕರು ಈ ಹಾಡುಗಳಿಗೆ ಜೀವ ತುಂಬಿದ್ದಾರೆ.
ಇದನ್ನೂ ಓದಿ: 'ಗ್ರಾಮಾಯಣ' ಚಿತ್ರತಂಡ ಸೇರಿಕೊಂಡ ನಟಿ ಮೇಘಾ ಶೆಟ್ಟಿ
ಭುವನ್ ಮೂವೀಸ್ ಬ್ಯಾನರ್ ಅಡಿ ನಿರ್ಮಾಣವಾಗಿರುವ 'ಅಂದೊಂದಿತ್ತು ಕಾಲ' ಚಿತ್ರದಲ್ಲಿ ವಿನಯ್ ರಾಜ್ಕುಮಾರ್ಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಇದರೊಂದಿಗೆ ನಿಶಾ ಮಿಲನ, ಅರುಣಾ ಬಾಲರಾಜ್, ಕಡ್ಡಿಪುಡಿ ಚಂದ್ರು, ಜಗ್ಗಪ್ಪ ಮತ್ತು ಗೋವಿಂದೇಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಈಮಧ್ಯೆ, ವಿನಯ್ ರಾಜ್ಕುಮಾರ್ ಅವರು 'ಗ್ರಾಮಾಯಣ' ಸಿನಿಮಾದ ಚಿತ್ರೀಕರಣವನ್ನು ಅಕ್ಟೋಬರ್ 4ರಂದು ಪ್ರಾರಂಭಿಸಲು ಯೋಜಿಸಿದ್ದಾರೆ. ಇದು ಗ್ರಾಮೀಣ ಹಳ್ಳಿಯ ಹಿನ್ನೆಲೆಯಲ್ಲಿ ನಡೆಯುವ ಕಥೆಯನ್ನು ಹೊಂದಿದ್ದು, ಮೇಘಾ ಶೆಟ್ಟಿ ನಾಯಕಿಯಾಗಿದ್ದಾರೆ.
Advertisement