ಸುದೀಪ್.. ಇನ್ನು ಮುಂದೆ ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ: ಪ್ರಕಾಶ್ ರಾಜ್

ಕನ್ನಡದ ಸ್ಟಾರ್ ನಟ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನಿರ್ಧಾರದ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ.
ಪ್ರಕಾಶ್ ರಾಜ್, ಕಿಚ್ಚ ಸುದೀಪ್
ಪ್ರಕಾಶ್ ರಾಜ್, ಕಿಚ್ಚ ಸುದೀಪ್
Updated on

 ಕನ್ನಡದ ಸ್ಟಾರ್ ನಟ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನಿರ್ಧಾರದ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ.

ಸುದೀಪ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಯಾದಾಗಿನಿಂದಲೂ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಿರುವ ಪ್ರಕಾಶ್ ರಾಜ್, ಈಗ ಸುದೀಪ್... ಇನ್ನು ಮುಂದೆ ನಿಮ್ಮನ್ನೂ... ನಿಮ್ಮ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ ಎಂದು ತಾಕೀತು ಮಾಡಿದ್ದಾರೆ.

ಸುದೀಪ್.. ಒಬ್ಬ ಮೇರು ಕಲಾವಿದನಾಗಿ ಸಮಾಜದ ಎಲ್ಲ ವರ್ಗದ ಪ್ರೀತಿಯಿಂದ ಬೆಳೆದ ನೀವು, ಜನ ಸಾಮಾನ್ಯನ ದನಿಯಾಗುವಿರಿ ಎಂದು ಆಶಿಸಿದ್ದೆ. ಆದರೆ ತಾವು ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ ಎಂದು ನಿರೀಕ್ಷಿಸಿರಲಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನಾ ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂಬ ತಮ್ಮ ಟ್ವೀಟ್ ಗೆ  ನಿನ್ನೆ ಸುದ್ದಿಗೋಷ್ಠಿಯಲ್ಲಿ ಸುದೀಪ್ ನೀಡಿರುವ ಹೇಳಿಕೆಯಿಂದ ನನಗೆ ಆಘಾತ ಮತ್ತು ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com