ವರಾಹರೂಪಂ ವಿವಾದ: ಕೇರಳ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿ!

ಕೆಜಿಎಎಫ್ 2 ಬಳಿಕ ಕನ್ನಡ ಚಿತ್ರರಂಗದಲ್ಲಿ ದಾಖಲೆಯ ಕಲೆಕ್ಷನ್ ಮಾಡಿದ ಕಾಂತಾರ ಚಿತ್ರದ ವರಾಹರೂಪಂ ಹಾಡಿನ ಮೇಲೆ ಕೇರಳದ ತೈಕುಡಮ್ ಬ್ರಿಡ್ಜ್ ಆಲ್ಬಂ ಬ್ಯಾಂಡ್ ಕೃತಿಚೌರ್ಯ ಆರೋಪ ಮಾಡಿತ್ತು.
ರಿಷಬ್-ವಿಜಯ್ ಕಿರಗಂದೂರು
ರಿಷಬ್-ವಿಜಯ್ ಕಿರಗಂದೂರು

ಕೋಯಿಕೋಡ್(ಕೇರಳ): ಕೆಜಿಎಎಫ್ 2 ಬಳಿಕ ಕನ್ನಡ ಚಿತ್ರರಂಗದಲ್ಲಿ ದಾಖಲೆಯ ಕಲೆಕ್ಷನ್ ಮಾಡಿದ ಕಾಂತಾರ ಚಿತ್ರದ ವರಾಹರೂಪಂ ಹಾಡಿನ ಮೇಲೆ ಕೇರಳದ ತೈಕುಡಮ್ ಬ್ರಿಡ್ಜ್ ಆಲ್ಬಂ ಬ್ಯಾಂಡ್ ಕೃತಿಚೌರ್ಯ ಆರೋಪ ಮಾಡಿದ್ದು ಈ ಸಂಬಂಧ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ ಕಿರಗಂದೂರು ಕೇರಳ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. 

ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೇರಳ ಪೊಲೀಸರು ನೋಟಿಸ್ ನೀಡಿದ್ದು ಈ ಹಿನ್ನೆಲೆಯಲ್ಲಿ ರಿಷಬ್ ಮತ್ತು ವಿಜಯ್ ಅವರು ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತನಿಖಾಧಿಕಾರಿ ಡಿಸಿಪಿ ಕೆಇ ಬೈಜು ತಿಳಿಸಿದ್ದಾರೆ.

2015ರಲ್ಲಿ ಕೇರಳದಲ್ಲಿ ಬಿಡುಗಡೆಯಾಗಿದ್ದ ತೈಕುಡಮ್ ಬ್ರಿಡ್ಜ್ ಆಲ್ಬಂ ಬ್ಯಾಂಡ್ ನ ನವರಸದ ನಕಲು ಎಂದು ಆರೋಪಿಸಿತ್ತು. ಅಲ್ಲದೆ ಕೃತಿಚೌರ್ಯ ಆರೋಪದಡಿ ನಿರ್ದೇಶಕ ಮತ್ತು ನಿರ್ಮಾಪಕರನ್ನು ಬಂಧಿಸಬೇಕು ಎಂದು ಪ್ರಕರಣ ದಾಖಲಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com