ಬಘೀರ ಚಿತ್ರದ ಶೂಟಿಂಗ್ ವೇಳೆ ಅವಘಡ: ನಟ ಶ್ರೀಮುರಳಿ ಕಾಲಿಗೆ ಗಾಯ, ಶೀರ್ಘದಲ್ಲೇ ಸರ್ಜರಿ!

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಬಘೀರ ಚಿತ್ರದ ಶೂಟಿಂಗ್ ವೇಳೆ ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.
ನಟ ಶ್ರೀಮುರಳಿ
ನಟ ಶ್ರೀಮುರಳಿ

ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಬಘೀರ ಚಿತ್ರದ ಶೂಟಿಂಗ್ ವೇಳೆ ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. 

ಇಂದು ರಾಕ್ ಲೈನ್ ಸ್ಟುಡಿಯೋದಲ್ಲಿ ಬಘೀರ ಚಿತ್ರದ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ನಟನ ಕಾಲಿಗೆ ಪೆಟ್ಟಾಗಿದ್ದು ಶೀಘ್ರದಲ್ಲೇ ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ. 

ಶೂಟಿಂಗ್ ನಲ್ಲಿ ಗಾಯಗೊಂಡಿದ್ದ ಶ್ರೀಮುರಳಿಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ನಟನಿಗೆ ಸೂಕ್ತ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ. 

ಕೆಜಿಎಫ್ ಚಾಪ್ಟರ್ 2 ಮತ್ತು ಕಾಂತಾರ ಸಿನಿಮಾಗಳ ಮೆಗಾ ಯಶಸ್ಸಿನ ನಂತರ ಹೊಂಬಾಳೆ ಫಿಲ್ಮ್ಸ್ ಇದೀಗ ಬಘೀರ ಚಿತ್ರವನ್ನು ನಿರ್ಮಿಸುತ್ತಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಕಥೆ ಬರೆದಿದ್ದು ಲಕ್ಕಿ ಸಿನಿಮಾ ಖ್ಯಾತಿಯ ಡಾ. ಸೂರಿ ನಿರ್ದೇಶನ ಮಾಡುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com