social_icon

ರಕ್ಷಿತ್‌ ಶೆಟ್ಟಿ ಅಭಿನಯದ 777 ಚಾರ್ಲಿಗೆ ಮತ್ತೊಂದು ಗರಿ; ನಿರ್ದೇಶಕ ಕಿರಣ್‌ರಾಜ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ರಕ್ಷಿತ್ ಶೆಟ್ಟಿ ನಟಿಸಿರುವ 777 ಚಾರ್ಲಿ ಚಿತ್ರವು ದೆಹಲಿಯಲ್ಲಿ 13ನೇ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಅಧಿಕೃತವಾಗಿ ಆಯ್ಕೆಯಾಗಿದೆ. ಕಿರಣ್‌ರಾಜ್ ಅವರು ಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಸ್ವೀಕರಿಸಲು ಸಜ್ಜಾಗಿದ್ದಾರೆ.

Published: 04th May 2023 02:52 PM  |   Last Updated: 04th May 2023 07:01 PM   |  A+A-


777 Charlie Film Poster - Kiranraj

777 ಚಾರ್ಲಿ ಚಿತ್ರದ ದೃಶ್ಯ - ಕಿರಣ್ ರಾಜ್

Posted By : Ramyashree GN
Source : Express News Service

ಜೂನ್ 10ಕ್ಕೆ ಕಿರಣ್‌ರಾಜ್ ನಿರ್ದೇಶನದ 777 ಚಾರ್ಲಿ ಸಿನಿಮಾ ಬಿಡುಗಡೆಯಾಗಿ ವರ್ಷವಾಗಲಿದೆ. ಚಿತ್ರತಂಡ ವಾರ್ಷಿಕೋತ್ಸವವನ್ನು ಆಚರಿಸಲು ಸಿದ್ಧವಾಗಿದೆ. ಈಗಲೂ ಚಿತ್ರ ಹಾಟ್ ಟಾಪಿಕ್ ಆಗಿ ಮುಂದುವರಿಯುತ್ತಿದ್ದು, ಮತ್ತೊಂದು ಹೊಸ ಸುದ್ದಿ ಎಂದರೆ ರಕ್ಷಿತ್ ಶೆಟ್ಟಿ ನಟಿಸಿರುವ ಚಿತ್ರವು ದೆಹಲಿಯಲ್ಲಿ 13ನೇ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಅಧಿಕೃತವಾಗಿ ಆಯ್ಕೆಯಾಗಿದೆ. 

ಇದರ ಜೊತೆಗೆ, ಚಾರ್ಲಿ ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ಕಿರಣ್‌ರಾಜ್ ಅವರು ಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಸ್ವೀಕರಿಸಲು ಸಜ್ಜಾಗಿದ್ದಾರೆ.

ಈ ಬಗ್ಗೆ ಮಾತನಾಡುವ ಕಿರಣರಾಜ್, 'ಚಿತ್ರವನ್ನು ಗುರುತಿಸುತ್ತಿರುವುದು ಇಡೀ ಪಾತ್ರವರ್ಗ ಮತ್ತು ತಂಡದ ಶ್ರಮ ಮತ್ತು ಪರಿಶ್ರಮದ ಫಲಿತಾಂಶವಾಗಿದೆ ಎಂದು ನಾನು ನಂಬುತ್ತೇನೆ. ಒಂದು ಹಂತದಲ್ಲಿ, ನಮ್ಮ ಕನ್ನಡ ಚಲನಚಿತ್ರಗಳು ರಾಜ್ಯದ ಗಡಿಯನ್ನು ದಾಟುತ್ತಿರಲಿಲ್ಲ. ಆದರೆ, ಈಗ ನಮಗೆ ಸ್ಪರ್ಧಿಸಿ ಗೆಲ್ಲುವ ಅವಕಾಶವಿದ್ದು, ಅದು ದೊಡ್ಡ ಗೌರವವಾಗಿದೆ. ರಾಷ್ಟ್ರೀಯ ವೇದಿಕೆಗಳಲ್ಲಿ ತಾರೆಯರನ್ನು ಅಭಿನಂದಿಸುತ್ತಿರುವಾಗ, ಚಲನಚಿತ್ರವು ಮನ್ನಣೆಯನ್ನು ಪಡೆಯುವುದು ಅಷ್ಟೇ ಅಗತ್ಯವಾಗಿದೆ' ಎನ್ನುತ್ತಾರೆ.

ಇದನ್ನೂ ಓದಿ: 777 ಚಾರ್ಲಿ ನಂತರ ಮುಂದಿನ ಸಿನಿಮಾಗೆ ಕಿರಣ್‌ರಾಜ್ ರೆಡಿ; ಹಾರರ್ ಕಾಮಿಡಿ ಚಿತ್ರ ತಯಾರಿಸಲು ಸಿದ್ಧತೆ

ಕುತೂಹಲಕಾರಿಯಾಗಿ, 777 ಚಾರ್ಲಿ ಸಿನಿಮಾ ಈಗಲೂ ಬೇಡಿಕೆಯಲ್ಲಿದೆ ಮತ್ತು ಚಿತ್ರದ ಜಪಾನೀಸ್ ಆವೃತ್ತಿಯು ಜೂನ್ ಮತ್ತು ಆಗಸ್ಟ್ ನಡುವೆ ಬಿಡುಗಡೆಯಾಗುವ ನಿರೀಕ್ಷೆಯಿದೆ. ಶೀಘ್ರದಲ್ಲೇ ಲ್ಯಾಟಿನ್ ಅಮೆರಿಕ ಮತ್ತು ತೈವಾನ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಕಿರಣ್‌ರಾಜ್ ಬಹಿರಂಗಪಡಿಸಿದ್ದಾರೆ.

ಚಿತ್ರದಲ್ಲಿ ನಟಿ ಸಂಗೀತಾ ಶೃಂಗೇರಿ, ರಾಜ್ ಬಿ ಶೆಟ್ಟಿ, ಶಾರ್ವರಿ ಮತ್ತು ಬಾಬಿ ಸಿಂಹ ನಟಿಸಿದ್ದಾರೆ. ಚಿತ್ರಕ್ಕೆ ನೋಬಿನ್ ಪಾಲ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣವಿದೆ.


Stay up to date on all the latest ಸಿನಿಮಾ ಸುದ್ದಿ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp