ಸೈಕಲಾಜಿಕಲ್ ಥ್ರಿಲ್ಲರ್ 'ಅಜಾಗ್ರತ' ಸಿನಿಮಾದಲ್ಲಿ ರಾಧಿಕಾ ಕುಮಾರಸ್ವಾಮಿ

ರವಿ ಬೋಪಣ್ಣ (2022) ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿರುವ ಮತ್ತು ಭೈರಾದೇವಿಯ ಬಿಡುಗಡೆಗಾಗಿ ಕಾಯುತ್ತಿರುವ ರಾಧಿಕಾ ಕುಮಾರಸ್ವಾಮಿ ಅವರು ಅಜಾಗ್ರತ ಎಂಬ ಸೈಕಲಾಜಿಕಲ್ ಥ್ರಿಲ್ಲರ್‌ನಲ್ಲಿ ನಟಿಸಲು ಸಿದ್ಧರಾಗಿದ್ದಾರೆ.
ರಾಧಿಕಾ ಕುಮಾರಸ್ವಾಮಿ ಮತ್ತು ಶ್ರೇಯಸ್
ರಾಧಿಕಾ ಕುಮಾರಸ್ವಾಮಿ ಮತ್ತು ಶ್ರೇಯಸ್
Updated on

ರವಿ ಬೋಪಣ್ಣ (2022) ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿರುವ ಮತ್ತು ಭೈರಾದೇವಿಯ ಬಿಡುಗಡೆಗಾಗಿ ಕಾಯುತ್ತಿರುವ ರಾಧಿಕಾ ಕುಮಾರಸ್ವಾಮಿ ಅವರು ಅಜಾಗ್ರತ ಎಂಬ ಸೈಕಲಾಜಿಕಲ್ ಥ್ರಿಲ್ಲರ್‌ನಲ್ಲಿ ನಟಿಸಲು ಸಿದ್ಧರಾಗಿದ್ದಾರೆ.

ಎಂ ಶಶಿಧರ್ ನಿರ್ದೇಶನದ ಈ ಚಿತ್ರವು ಖ್ಯಾತ ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಅವರ ಕನ್ನಡ ಚೊಚ್ಚಲ ಚಿತ್ರವಾಗಿದೆ. ರವಿರಾಜ್ ನಿರ್ಮಿಸಿರುವ ಅಜಾಗ್ರತ ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ, ಕೊಂಕಣಿ, ಮರಾಠಿ ಸೇರಿದಂತೆ ಏಳು ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಂಡು ಬಿಡುಗಡೆಯಾಗಲಿದೆ.

ರಾಧಿಕಾ ಮತ್ತು ಶ್ರೇಯಸ್ ಅವರಲ್ಲದೆ, ಈ ಚಿತ್ರದಲ್ಲಿ ಪ್ರಸಿದ್ಧ ತಮಿಳು ನಟ-ಚಿತ್ರ ನಿರ್ಮಾಪಕ ಸಮುದ್ರಕನಿ, ಜಯಪ್ರಕಾಶ್, ಸ್ಪರ್ಶ ರೇಖಾ, ದೇವರಾಜ್, ಸುಚೇಂದ್ರ ಪ್ರಸಾದ್, ಮತ್ತು ವಿನಯ್ ಪ್ರಸಾದ್ ನಟಿಸಿದ್ದಾರೆ.

ಶ್ರೀಹರಿ ಸಂಗೀತ ನಿರ್ದೇಶಕರಾಗಿದ್ದಾರೆ, ಗೌಳಿ ಖ್ಯಾತಿಯ ಸಂದೀಪ್ ವಲ್ಲೂರಿ ಛಾಯಾಗ್ರಾಹಕರಾಗಿದ್ದಾರೆ. ಅಜಾಗ್ರತವನ್ನು ಮೇ 13 ರಂದು ಹೈದರಾಬಾದ್‌ನಲ್ಲಿ ಅಧಿಕೃತವಾಗಿ ಪ್ರಾರಂಭಿಸಲಾಗುವುದು ಮತ್ತು ಮೇ 15 ರಂದು ಚಿತ್ರೀಕರಣ ಪ್ರಾರಂಭವಾಗಲಿದೆ.

ಚಿತ್ರದ ಚಿತ್ರೀಕರಣ ಹೈದರಾಬಾದ್, ಬೆಂಗಳೂರು ಮತ್ತು ಮುಂಬೈನಲ್ಲಿ ನಡೆಯಲಿದೆ. ಅಶ್ವಿನಿ ರಾಮ್ ಪ್ರಸಾದ್ ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅಭಿನಯದ ‘ಘಾರ್ಗ’ ಚಿತ್ರವನ್ನು ನಿರ್ದೇಶಿಸಿರುವ ಶಶಿಧರ್ ಅವರಿಗೆ ಇದು ಅಜಾಗ್ರತ ಎರಡನೇ ನಿರ್ದೇಶನದ ಚಿತ್ರವಾಗಿದೆ.

ಅಜಾಗ್ರತ ಒಂದು ಸೈಕಾಲಜಿಕಲ್ ಕ್ರೈಂ ಥ್ರಿಲ್ಲೆರ್ ಕಥೆ ಹೊಂದಿರುವ ಚಿತ್ರವಾಗಿದೆ. ಏಳು ಭಾಷೆಗಳಲ್ಲಿಯೂ ನೇರ ಚಿತ್ರೀಕರಣವಾಗುತ್ತಿರುವುದು ಇದರ ವಿಶೇಷ. ಚಿತ್ರ ಪ್ರೇಮಿಗಳಿಗೆ ಹೊಸ ಅನುಭವ ಕೊಡಲು ಅವರವರ ಭಾಷೆ ಯಲ್ಲಿ ಚಿತ್ರೀಕರಿಸಿ, ಅವರವರಭಾಷೆ ಯಲ್ಲೇ  ಅಜಾಗ್ರತ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರ ತಂಡ ತಯಾರಿ ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com