ಬೆಂಗಳೂರು ಮಹಾಮಳೆಯ ಅವಾಂತರ: ನಟ ಜಗ್ಗೇಶ್ ಐಷಾರಾಮಿ ಕಾರು ಮುಳುಗಡೆ

ನಿನ್ನೆ ಸುರಿದ ಭಾರೀ ಮಳೆಗೆ ಸಾಕಷ್ಟು ಹಾನಿ ಉಂಟಾಗಿದೆ. ಮಳೆಯ ಅವಾಂತರಕ್ಕೆ ಬೆಂಗಳೂರಿನಲ್ಲಿ ಯುವತಿಯೂ ಬಲಿ ಆಗಿದ್ದಾಳೆ. ಸಾಕಷ್ಟು ಕಡೆಗಳಲ್ಲಿ ಮರ ಮುರಿದುಬಿದ್ದು ಹಾನಿ ಉಂಟಾಗಿದೆ.
ಜಗ್ಗೇಶ್
ಜಗ್ಗೇಶ್

ಬೆಂಗಳೂರು: ನಿನ್ನೆ ಸುರಿದ ಭಾರೀ ಮಳೆಗೆ ಸಾಕಷ್ಟು ಹಾನಿ ಉಂಟಾಗಿದೆ. ಮಳೆಯ ಅವಾಂತರಕ್ಕೆ ಬೆಂಗಳೂರಿನಲ್ಲಿ ಯುವತಿಯೂ ಬಲಿ ಆಗಿದ್ದಾಳೆ. ಸಾಕಷ್ಟು ಕಡೆಗಳಲ್ಲಿ ಮರ ಮುರಿದುಬಿದ್ದು ಹಾನಿ ಉಂಟಾಗಿದೆ. ಈ ಮಧ್ಯೆ ನಟ, ರಾಜಕಾರಣಿ ಜಗ್ಗೇಶ್​ಗೂ ಬೆಂಗಳೂರು ಮಳೆಯ ಎಫೆಕ್ಟ್ ತಟ್ಟಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಜಗ್ಗೇಶ್ ಮಳೆಯಿಂದಾದ ಅವ್ಯವಸ್ಥೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಮನೆಯ ರಿಪೇರಿ ಕಾರ್ಯ ಪ್ರಯುಕ್ತ ನನ್ನ ರಸ್ತೆಯ ಸ್ನೇಹಿತ ಮುರಳಿ ಮನೆಯ ಸೆಲ್ಲಾರ್ ನಲ್ಲಿ ನಿಲ್ಲಿಸಿದ್ದ ನನ್ನ bmw5 ಕಾರು ಅಕಾಲಿಕ ಮಳೆ ನೀರಿನಲ್ಲಿ ಮುಳುಗಡೆ ಆಯಿತು 5hp motor ಬಳಸಿ ನೀರು ಹೊರಹಾಕಿಸಲಾಯಿತು.. ಇಂಥ ಅಲ್ಲಿಕಲ್ಲಿನ ಮಳೆ ಈ ತಿಂಗಳಲ್ಲಿ ಬಂದದ್ದು ಆಶ್ಚರ್ಯ ಎಂದು ಟ್ವೀಟ್ ಮಾಡಿದ್ದಾರೆ.

ನಿನ್ನೆ ಸುರಿದ ಅಕಾಲಿಕ ಮಳೆಯಿಂದಾಗಿ ಜಗ್ಗೇಶ್ ಅವರ BMW ಕಾರು ಮುಳುಗಡೆ ಆಗಿದೆ. ತಮ್ಮ ಮನೆಯ ರಿಪೇರಿ ಕಾರ್ಯ ಹಿನ್ನೆಲೆಯಲ್ಲಿ ಜಗ್ಗೇಶ್ ಅವರು ತಮ್ಮ ಕಾರನ್ನು ಸ್ನೇಹಿತ ಮುರುಳಿ ಎಂಬುವರ ಮನೆಯ ಸೆಲ್ಲಾರ್ ನಲ್ಲಿ ನಿಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com