social_icon

'ಕಾಂತಾರ' ಪ್ರೀಕ್ವೆಲ್ ಅಧಿಕೃತ ಲಾಂಚ್‌ಗೆ ವೇದಿಕೆ ಸಿದ್ಧ: ನವೆಂಬರ್ 27ರಂದು ಅದ್ಧೂರಿ ಮುಹೂರ್ತ

ಈ ವರ್ಷದ ಆರಂಭದಲ್ಲಿ ಬ್ಲಾಕ್‌ಬಸ್ಟರ್ ಸಿನಿಮಾ 'ಕಾಂತಾರ'ವನ್ನು ನೀಡಿದ ನಟ- ನಿರ್ದೇಶಕ ರಿಷಬ್ ಶೆಟ್ಟಿ, ಪ್ರಿಕ್ವೆಲ್‌ ಅನ್ನು ತಯಾರಿಸುವುದಾಗಿ ಬಹಿರಂಗಪಡಿಸಿದ್ದರು. ಅದಾದ 10 ತಿಂಗಳ ನಂತರ, ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಿರ್ಮಿಸಿದ ಬಹು ನಿರೀಕ್ಷಿತ ಚಿತ್ರವು ನವೆಂಬರ್ 27 ರಂದು ಅದ್ಧೂರಿ ಮುಹೂರ್ತದೊಂದಿಗೆ ಅಧಿಕೃತವಾಗಿ ಲಾಂಚ್ ಆಗಲಿದೆ.

Published: 20th November 2023 10:27 AM  |   Last Updated: 20th November 2023 10:27 AM   |  A+A-


Kantara cinema still

ಕಾಂತಾರ ಸಿನಿಮಾ ಸ್ಟಿಲ್

Posted By : Ramyashree GN
Source : Express News Service

ಈ ವರ್ಷದ ಆರಂಭದಲ್ಲಿ ಬ್ಲಾಕ್‌ಬಸ್ಟರ್ ಸಿನಿಮಾ 'ಕಾಂತಾರ'ವನ್ನು ನೀಡಿದ ನಟ- ನಿರ್ದೇಶಕ ರಿಷಬ್ ಶೆಟ್ಟಿ, ಬಹುಭಾಷಾ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿರುವ ಪ್ರಿಕ್ವೆಲ್‌ ಅನ್ನು ತಯಾರಿಸುವುದಾಗಿ ಬಹಿರಂಗಪಡಿಸಿದ್ದರು. ಅದಾದ 10 ತಿಂಗಳ ನಂತರ, ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಿರ್ಮಿಸಿದ ಬಹು ನಿರೀಕ್ಷಿತ ಚಿತ್ರವು ನವೆಂಬರ್ 27 ರಂದು ಅದ್ಧೂರಿ ಮುಹೂರ್ತದೊಂದಿಗೆ ಅಧಿಕೃತವಾಗಿ ಲಾಂಚ್ ಆಗಲಿದೆ.

ಈ ಹಿಂದಿನ ಮಾತುಕತೆಯಲ್ಲಿ ರಿಷಬ್, ಕಾಂತಾರ ಚಿತ್ರದ ಚಿತ್ರೀಕರಣದ ವೇಳೆ ತನ್ನ ಮನಸ್ಸಿನಲ್ಲಿ ಪ್ರಿಕ್ವೆಲ್ ಕಲ್ಪನೆಯು ಹೊಳೆಯಿತು ಮತ್ತು ಅದನ್ನು ಪರಿಷ್ಕರಿಸಲು ಸಮಯ ತೆಗೆದುಕೊಂಡಿದ್ದಾಗಿ ಉಲ್ಲೇಖಿಸಿದ್ದಾರೆ. ಕಾಂತಾರ ಸಿನಿಮಾ ಕೃಷಿ, ಊಳಿಗಮಾನ್ಯ ಪದ್ಧತಿ, ಭೂ ಒತ್ತುವರಿ, ಪರಿಸರ ಸಂರಕ್ಷಣೆ ವಿಚಾರಗಳು, ಮಾನವ ಮತ್ತು ಪ್ರಕೃತಿ ಸಂಘರ್ಷ, ಶಿವನ ಪಯಣ ಇತ್ಯಾದಿಗಳ ಕುರಿತು ಚರ್ಚೆಗೆ ಎಡೆಮಾಡಿಕೊಟ್ಟಿದೆ ಎಂದು ವಿವರಿಸಿದ ರಿಷಬ್, ಕಾಂತಾರ ಚಿತ್ರದ ಪ್ರಮುಖ ಪಾತ್ರವಾದ ತಂದೆಯ ದೈವತ್ವವು ವ್ಯಾಪಕ ಆಳವನ್ನು ಹೊಂದಿದೆ ಮತ್ತು ಇದರ ಹಿನ್ನೆಲೆಯನ್ನು ಪ್ರೀಕ್ವೆಲ್‌ನಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದರು. 

ದೊಡ್ಡ ಬಜೆಟ್‌ನಲ್ಲಿ ಚಿತ್ರ ತಯಾರಾಗಲಿದ್ದು, ಕಾಂತಾರವನ್ನು ಮೀರಿಸುತ್ತದೆ ಎಂದು ನಿರ್ಮಾಪಕರು ಮಾಹಿತಿ ನೀಡಿದ್ದಾರೆ.

ರಿಷಬ್, ಅವರ ತಂಡದ ಬರಹಗಾರರಾದ ಅನಿರುದ್ಧ್ ಮಹೇಶ್ ಮತ್ತು ಶನಿಲ್ ಗುರು ಅವರೊಂದಿಗೆ ಸ್ಕ್ರಿಪ್ಟ್ ಅನ್ನು ಸಿದ್ಧಪಡಿಸಿದ್ದಾರೆ. ನಿರ್ದೇಶನದ ಜೊತೆಗೆ ತಾವೇ ನಾಯಕನಾಗಿಯೂ ನಟಿಸುತ್ತಿರುವ ರಿಷಬ್, ಹೆಚ್ಚಿನ ವಿವರಗಳನ್ನು ಮುಚ್ಚಿಟ್ಟಿದ್ದಾರೆ. ಆದರೆ, ಈ ಪಾತ್ರಕ್ಕಾಗಿ ರಿಷಬ್ ದೈಹಿಕ ರೂಪಾಂತರಕ್ಕೆ ಒಳಗಾಗುತ್ತಾರೆ ಎಂಬುದು ಸ್ಪಷ್ಟವಾಗಿದೆ.

ಇದನ್ನೂ ಓದಿ: ಸದ್ಯಕ್ಕೆ ನನ್ನ ಗಮನ ಕೇವಲ ಕಾಂತಾರ ಪ್ರೀಕ್ವೆಲ್ ಮೇಲೆ: ಅಶುತೋಷ್ ಗೋವಾರಿಕರ್ ಸಿನಿಮಾದಲ್ಲಿ ನಟಿಸುವ ಬಗ್ಗೆ ಗುಟ್ಟು ಬಿಡದ ರಿಷಬ್ ಶೆಟ್ಟಿ

ಕಾಂತಾರ ಚಿತ್ರದಲ್ಲಿ ನಾಯಕಿಯಾಗಿ ಸಪ್ತಮಿ ಗೌಡ, ಕಿಶೋರ್ ಕುಮಾರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಪ್ರಸಾದ್ ತೂಮಿನಾಡ್, ಸ್ವರಾಜ್ ಶೆಟ್ಟಿ ಮತ್ತು ಮಾನಸಿ ಸುಧೀರ್ ಮುಂತಾದವರು ನಟಿಸಿದ್ದರು. 

ಪ್ರಿಕ್ವೆಲ್‌ಗೆ ಚಿತ್ರತಂಡ ಈಗಾಗಲೇ ಬಹುತೇಕ ಸ್ಥಳಗಳನ್ನು ಅಂತಿಮಗೊಳಿಸಿದ್ದು, ನಟರ ಗುಂಪನ್ನು ಶಾರ್ಟ್‌ಲಿಸ್ಟ್ ಮಾಡಿದ್ದಾರೆ. ಕೆಲವು ನಟರು ತಮ್ಮ ಪಾತ್ರಗಳನ್ನು ಪುನರಾವರ್ತಿಸುತ್ತಿದ್ದಾರೆ ಎಂದು ರಿಷಬ್ ಪ್ರಸ್ತಾಪಿಸಿದ್ದು, ಈ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾಗೆ ಸೇರ್ಪಡೆಗೊಳ್ಳುವ ಹೊಸ ಹೆಸರುಗಳನ್ನು ನಾವು ಕಾದು ನೋಡಬೇಕಾಗಿದೆ.

ಇದನ್ನೂ ಓದಿ: 10 ಸೈಮಾ ಪ್ರಶಸ್ತಿ ಬಾಚಿಕೊಂಡ ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ' ಸಿನಿಮಾ!

ತಂತ್ರಜ್ಞರಿಗೆ ಸಂಬಂಧಿಸಿದಂತೆ, ಕಾಂತಾರ ಪ್ರೀಕ್ವೆಲ್ ಸಂಗೀತ ಸಂಯೋಜಕ ಅಜನೀಶ್ ಲೋಕನಾಥ್ ಮತ್ತು ಛಾಯಾಗ್ರಾಹಕ ಅರವಿಂದ್ ಎಸ್ ಕಶ್ಯಪ್ ಅವರ ಮರಳುವಿಕೆಯನ್ನು ಒಳಗೊಂಡಿದೆ.


Stay up to date on all the latest ಸಿನಿಮಾ ಸುದ್ದಿ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp