social_icon

ಭಾರತದ ಕಾಮಿಡಿಯನ್ ವೀರ್ ದಾಸ್ ಗೆ ಇಂಟರ್ನ್ಯಾಷನಲ್ ಎಮ್ಮಿಸ್ ಪ್ರಶಸ್ತಿ

ಟಿವಿ ಶೋಗಳಿಗೆ ನೀಡಲಾಗುವ ವಿಶ್ವದ ಸರ್ವೋತ್ತಮ ಪ್ರಶಸ್ತಿಯೆಂದು ಎಮ್ಮಿ ಪ್ರಶಸ್ತಿಯನ್ನು ಪರಿಗಣಿಸಲಾಗಿದೆ. ಬೆರಳೆಣಿಕೆಯ ಭಾರತೀಯರಷ್ಟೆ ಈ ಪ್ರಶಸ್ತಿ ಗೆದ್ದಿದ್ದಾರೆ. ಇದೀಗ ಆ ಪಟ್ಟಿಗೆ ಹೊಸ ಸೇರ್ಪಡೆ ಭಾರತದ ಜನಪ್ರಿಯ ಕಮಿಡಿಯನ್ ವೀರ್ ದಾಸ್.

Published: 21st November 2023 09:53 AM  |   Last Updated: 21st November 2023 09:53 AM   |  A+A-


Vir Das

ವೀರ್ ದಾಸ್

Posted By : Shilpa D
Source : Online Desk

ಟಿವಿ ಶೋಗಳಿಗೆ ನೀಡಲಾಗುವ ವಿಶ್ವದ ಸರ್ವೋತ್ತಮ ಪ್ರಶಸ್ತಿಯೆಂದು ಎಮ್ಮಿ ಪ್ರಶಸ್ತಿಯನ್ನು ಪರಿಗಣಿಸಲಾಗಿದೆ. ಬೆರಳೆಣಿಕೆಯ ಭಾರತೀಯರಷ್ಟೆ ಈ ಪ್ರಶಸ್ತಿ ಗೆದ್ದಿದ್ದಾರೆ. ಇದೀಗ ಆ ಪಟ್ಟಿಗೆ ಹೊಸ ಸೇರ್ಪಡೆ ಭಾರತದ ಜನಪ್ರಿಯ ಕಮಿಡಿಯನ್ ವೀರ್ ದಾಸ್.

ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರವಾಗುತ್ತಿರುವ ವೀರ್ ದಾಸ್​ ಕಾಮಿಡಿ ಸ್ಪೆಷಲ್ ‘ವೀರ್ ದಾಸ್; ಲ್ಯಾಂಡಿಂಗ್’ ಎಮ್ಮಿಯ ಯೂನಿಕ್ ಕಾಮಿಡಿ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದೆ. ಈ ಪ್ರಶಸ್ತಿಯನ್ನು ‘ಡೆರ್ರಿ ಗರ್ಲ್ಸ್​-ಸೀಸನ್ 3’ ಜೊತೆಗೆ ಹಂಚಿಕೊಳ್ಳಲಾಗಿದೆ. ‘ವೀರ್ ದಾಸ್; ಲ್ಯಾಂಡಿಂಗ್’ ಹಾಗೂ ‘ಡೆರ್ರಿ ಗರ್ಲ್ಸ್​-ಸೀಸನ್ 3’ ಎರಡೂ ಶೋಗಳಿಗೆ ಜಂಟಿಯಾಗಿ ಪ್ರಶಸ್ತಿಯನ್ನು ನೀಡಲಾಗಿದೆ.

ಅಮೆರಿಕ ಹಾಗೂ ಭಾರತದ ಸಂಸ್ಕೃತಿಗಳ ಬಗ್ಗೆ ರಾಜಕೀಯ ದೃಷ್ಟಿಕೋನದಿಂದ ‘ವೀರ್ ದಾಸ್; ಲ್ಯಾಂಡಿಂಗ್’ ಶೋನಲ್ಲಿ  ಮಾತನಾಡಿದ್ದಾರೆ. ರಾಜಕಾರಣಿಯೊಬ್ಬ ಈ ಭಿನ್ನತೆಯನ್ನು ಹೇಗೆ ಗ್ರಹಿಸುತ್ತಾನೆ ಎಂಬುದನ್ನು ಹಾಸ್ಯಮಯವಾಗಿ ವಿವರಿಸಿದ್ದಾರೆ. ಜೊತೆಗೆ ಭಾರತೀಯನಾಗಿ ಅಮೆರಿಕದಲ್ಲಿ ಬೆಳೆದ ತನಗೆ ಸಂಸ್ಕೃತಿ, ಸ್ವಂತ ನೆಲ ಎರಡೂ ಇಲ್ಲದ ಬಗ್ಗೆಯೂ ವೀರ್ ದಾಸ್ ಮಾತನಾಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಒಳಗೊಂಡ 'ಅಬಂಡನ್ಸ್ ಇನ್ ಮಿಲೆಟ್ಸ್' ಹಾಡು ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನ

ವೀರ್ ದಾಸ್ ಭಾರತದ ಜನಪ್ರಿಯ ಕಮಿಡಿಯನ್. ಅವರು ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ತುಂಬಿದ ಗೃಹಗಳ ಕಾಮಿಡಿ ಶೋಗಳನ್ನು ನೀಡಿದ್ದಾರೆ. ಅವರ ಕೆಲವು ಶೋಗಳು ವಿವಾದಕ್ಕೆ ಕಾರಣವಾಗಿದ್ದೂ ಸಹ ಇದೆ. ವಿದೇಶಗಳಲ್ಲಿ ಭಾರತದ ಬಗ್ಗೆ ಕೀಳಾಗಿ ಮಾತನಾಡಿದ್ದಾನೆ ಎಂದು ವೀರ್ ದಾಸ್ ವಿರುದ್ಧ ಆರೋಪ ಮಾಡಲಾಗಿತ್ತು. ದೂರು ಸಹ ದಾಖಲಾಗಿತ್ತು. ವೀರ್ ದಾಸ್ ಅನ್ನು ಭಯೋತ್ಪಾದಕ ಎಂದೂ ಸಹ ಕರೆಯಲಾಗಿತ್ತು. ಈಗ ಅವರಿಗೆ ಪ್ರತಿಷ್ಠಿತ ಎಮ್ಮಿ ಪ್ರಶಸ್ತಿ ಲಭಿಸಿದೆ.

ವೀರ್ ದಾಸ್ ಮಾತ್ರವೇ ಅಲ್ಲದೆ ಭಾರತೀಯ ಟಿವಿ ಜಗತ್ತಿನ ರಾಣಿ ಎಂದೇ ಕರೆಯಲಾಗುವ ಏಕ್ತಾ ಕಪೂರ್​ಗೂ ಪ್ರಶಸ್ತಿ ಲಭಿಸಿದೆ. ಭಾರತೀಯ ಟೆಲಿವಿಷನ್ ಜಗತ್ತಿನಲ್ಲಿ ತಂಡ ಬದಲಾವಣೆ ಹಾಗೂ ವೃತ್ತಿಜೀವನದ ಸಾಧನೆಗಾಗಿ ಏಕ್ತಾ ಕಪೂರ್ ಅವರಿಗೆ ಎಮ್ಮಿ ಡೈರೆಕ್ಟೊರೇಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

‘ಡೆಲ್ಲಿ ಕ್ರೈಂ’ ಸರಣಿಯ ನಟಿ ಶಫಾಲಿ ಶಾ ಅತ್ಯುತ್ತಮ ನಟಿ ವಿಭಾಗದಲ್ಲಿ ನಾಮಿನೇಟ್ ಆಗಿದ್ದರು ಆದರೆ ಅವರಿಗೆ ಪ್ರಶಸ್ತಿ ಕೊನೆಯ ಹಂತದಲ್ಲಿ ಕೈತಪ್ಪಿತು. ಜಿಮ್ ಸರ್ಬ್​ ಅವರುಗಳು ಸಹ ಪ್ರಶಸ್ತಿಗೆ ನಾಮಿನೇಟ್ ಆಗಿದ್ದರು. ಆದರೆ ಅವರಿಗೆ ಪ್ರಶಸ್ತಿ ಲಭಿಸಲಿಲ್ಲ. ವೀರ್ ದಾಸ್ ಎರಡು ಬಾರಿ ನಾಮಿನೇಟ್ ಆಗಿದ್ದರು, ಆದರೆ ಈ ಬಾರಿ ಅವರಿಗೆ ಪ್ರಶಸ್ತಿ ದೊರೆತಿದೆ.


Stay up to date on all the latest ಸಿನಿಮಾ ಸುದ್ದಿ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp