social_icon

ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಪ್ರೈಮ್ ವಿಡಿಯೋದಲ್ಲಿ ಲಭ್ಯ

ರಕ್ಷಿತ್ ಶೆಟ್ಟಿ ಅಭಿನಯದ ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಈಗ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಲಭ್ಯವಿದೆ. ಎರಡನೇ ಭಾಗವಾದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಕೂಡ ಮುಂದಿನ ತಿಂಗಳು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

Published: 29th September 2023 12:43 PM  |   Last Updated: 29th September 2023 12:43 PM   |  A+A-


A Still From Sapta Sagaradaache Ello

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಸ್ಟಿಲ್

Posted By : Ramyashree GN
Source : Express News Service

ರಕ್ಷಿತ್ ಶೆಟ್ಟಿ ಅಭಿನಯದ ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಈಗ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಲಭ್ಯವಿದೆ. ಎರಡನೇ ಭಾಗವಾದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಕೂಡ ಮುಂದಿನ ತಿಂಗಳು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಹೇಮಂತ್ ಎಂ ರಾವ್ ನಿರ್ದೇಶನದ ಈ ಚಿತ್ರದಲ್ಲಿ ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಅವಿನಾಶ್, ಚೈತ್ರ ಜೆ ಆಚಾರ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದು, ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿದೆ. ಗುಂಡು ಶೆಟ್ಟಿ ಜೊತೆಗೆ ಹೇಮಂತ್ ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಚಿತ್ರವು ಸೆಪ್ಟೆಂಬರ್ 1 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿತು ಮತ್ತು ವ್ಯಾಪಕ ಮೆಚ್ಚುಗೆ ಪಡೆಯಿತು. 
'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಒಟಿಟಿಯಲ್ಲಿ ರಿಲೀಸ್‌ ಆಗಬಹುದು ಎಂಬ ಕುತೂಹಲ ಎದುರಾಗಿತ್ತು. ಆದರೆ, ಸಪ್ತ ಸಾಗರದಾಚೆ ಎಲ್ಲೋ- ಸೈಡ್‌ ಬಿ ರಿಲೀಸ್‌ ನಂತರವೇ ಎರಡೂ ಸಿನಿಮಾಗಳು ಒಟ್ಟಿಗೆ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗಬಹುದು ಎನ್ನಲಾಗಿತ್ತು. ಆದರೆ, ಇದೀಗ ನಿನ್ನೆ ರಾತ್ರಿಯಿಂದಲೇ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಪ್ರೈಂ ವಿಡೋಯದಲ್ಲಿ ಸ್ಟ್ರೀಮಿಂಗ್‌ ಆರಂಭಿಸಿದೆ. ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಒಟಿಟಿಯಲ್ಲಿ ಲಭ್ಯವಿದೆ.

ಇದನ್ನೂ ಓದಿ: ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿನಯದ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಸ್ಟರ್‌ಪೀಸ್ ಎಂದ ಸಮಂತಾ!

ಕನ್ನಡದಲ್ಲಿ ಯಶಸ್ಸು ಕಂಡ ಬಳಿಕ ಸಪ್ತ ಸಾಗರದಾಚೆ ಎಲ್ಲೋ: ಸೈಡ್ ಎ ಚಿತ್ರವು ಸೆಪ್ಟೆಂಬರ್ 22 ರಂದು ತೆಲುಗಿನಲ್ಲಿ 'ಸಪ್ತ ಸಾಗರಾಲು ದಾಟಿ' ಎಂಬ ಶೀರ್ಷಿಕೆಯಲ್ಲಿ ಬಿಡುಗಡೆಯಾಯಿತು.

ಈ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಪುತ್ರ, ನಟ-ರಾಜಕಾರಣಿ ಉದಯನಿಧಿ ಸ್ಟಾಲಿನ್ ಕೂಡ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ನಟಿ ಸಮಂತಾ ರುತ್ ಪ್ರಭು ಕೂಡ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ್ದು, ನಟಿ ರುಕ್ಮಿಣಿ ವಸಂತ್ ನಟನೆಗೆ ಫುಲ್ ಮಾರ್ಕ್ಸ್ ನೀಡಿದ್ದರು.


Stay up to date on all the latest ಸಿನಿಮಾ ಸುದ್ದಿ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp