ಮೇ 1ರಂದು ಸ್ಯಾಂಡಲ್‌ವುಡ್‌ನ 'ಕೆಂಡಸಂಪಿಗೆ' ನಟಿ ಮಾನ್ವಿತಾ ಕಾಮತ್ ವಿವಾಹ!

ಸ್ಯಾಂಡಲ್‌ವುಡ್‌ನ 'ಕೆಂಡಸಂಪಿಗೆ' ನಟಿ ಮಾನ್ವಿತಾ ಕಾಮತ್ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಮಾನ್ವಿತಾ ಕಾಮತ್ ದಾಂಪತ್ಯ ಬದುಕಿಗೆ ಕಾಲಿಡಲು ಸಜ್ಜಾಗಿದ್ದು ಮೇ1 ರಂದು ಅವರು ಸಪ್ತಪದಿ ತುಳಿಯಲಿದ್ದಾರೆ.
ಮಾನ್ವಿತಾ ಕಾಮತ್
ಮಾನ್ವಿತಾ ಕಾಮತ್

ಸ್ಯಾಂಡಲ್‌ವುಡ್‌ನ 'ಕೆಂಡಸಂಪಿಗೆ' ನಟಿ ಮಾನ್ವಿತಾ ಕಾಮತ್ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಮಾನ್ವಿತಾ ಕಾಮತ್ ದಾಂಪತ್ಯ ಬದುಕಿಗೆ ಕಾಲಿಡಲು ಸಜ್ಜಾಗಿದ್ದು ಮೇ1 ರಂದು ಅವರು ಸಪ್ತಪದಿ ತುಳಿಯಲಿದ್ದಾರೆ.

ಸಂಗೀತ ನಿರ್ದೇಶಕ ಅರುಣ್ ಕುಮಾರ್ ಅವರು ಮಾನ್ವಿತಾ ಜೊತೆಗೆ ವಿವಾಹ ನಡೆಯಲಿದೆ. ನಟಿ ಮಾನ್ವಿತಾ ಮತ್ತು ಅರುಣ್ ಕುಮಾರ್ ಅವರ ವಿವಾಹವು ಮೇ 1ರಂದು ಮಂಗಳೂರಿನಲ್ಲಿ ಜರುಗಲಿದೆ. ಹಳದಿ ಶಾಸ್ತ್ರವು ಏಪ್ರಿಲ್‌ 29ರಂದು ನಡೆಯಲಿದೆ ಮತ್ತು ಸಂಗೀತ್ ಶಾಸ್ತ್ರವು ಏಪ್ರಿಲ್ 30ರಂದು ನಡೆಯಲಿದೆ. ಕೊಂಕಣಿ ಸಾಂಪ್ರದಾಯದಂತೆ ಮೇ 1ರಂದು ಮಾನ್ವಿತಾ ಮತ್ತು ಅರುಣ್ ದಾಂಪತ್ಯ ಬದುಕಿಗೆ ಕಾಲಿಡಲಿದ್ದಾರೆ. ಮದುವೆ ಕುರಿತಾದ ಡಿಜಿಟಲ್ ಆಮಂತ್ರಣ ಪತ್ರಿಕೆಯನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ.

ಆರ್.ಜೆಯಾಗಿ ವೃತ್ತಿಯನ್ನು ಆರಂಭಿಸಿದ್ದ ಮಾನ್ವಿತಾ ಆನಂತರ ಸಿನಿಮಾ ರಂಗಕ್ಕೆ ಬಂದರು. ಸೂರಿ ನಿರ್ದೇಶನದ ಕೆಂಡ ಸಂಪಿಗೆ ಸಿನಿಮಾ ಅವರಿಗೆ ಹೆಸರು ತಂದುಕೊಟ್ಟಿತು. ಆನಂತರ ಟಗರು ಸಿನಿಮಾದ ಮೂಲಕ ಸಾಕಷ್ಟು ಜನಕ್ಕೆ ಪರಿಚಯವಾದರು. ಅಲ್ಲಿಂದ ಟಗರು ಪುಟ್ಟಿ ಎಂದೇ ಫೇಮಸ್ ಆದರು.

ಮಾನ್ವಿತಾ ಕಾಮತ್
ಲೋಹಿತ್ ಹೆಚ್ ನಿರ್ದೇಶನದ 'ಕ್ಯಾಪ್ಚರ್' ಚಿತ್ರತಂಡ ಸೇರಿಕೊಂಡ ಟಗರು ಪುಟ್ಟಿ ಮಾನ್ವಿತಾ ಕಾಮತ್!

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com