ನಟ ದ್ವಾರಕೀಶ ವಿಧಿವಶ: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ, ನಾಳೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದು, ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್​​ ಮೀಲ್​ನಲ್ಲಿ ನಡೆಯಲಿದೆ.
ದ್ವಾರಕೀಶ್
ದ್ವಾರಕೀಶ್
Updated on

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದು, ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್​​ ಮೀಲ್​ನಲ್ಲಿ ನಡೆಯಲಿದೆ.

ದ್ವಾರಕೀಶ ಅವರ ಪಾರ್ಥೀವ ಶರೀರವು ಬುಧವಾರ ಬೆಳಗಿನ ಜಾವದವರೆಗೂ ಅವರ ನಿವಾಸದಲ್ಲಿಯೇ ಇರಲಿದ್ದು, ಗಣ್ಯರ ಮತ್ತು ಕುಟುಂಬಸ್ಥರು ಅಂತಿಮ ದರ್ಶನ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ದ್ವಾರಕೀಶ್
ನಟ ದ್ವಾರಕೀಶ್ ವಿಧಿವಶ: ಕಾಫಿ ಕುಡಿದು ಮಲಗಿದವರು ಮೇಲೇಳಲೇ ಇಲ್ಲ; ಕುಟುಂಬಸ್ಥರ ಮಾಹಿತಿ

ಬೆಳಿಗ್ಗೆ 7.30 ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, 11 ಗಂಟೆಯ ನಂತರ ಶವವನ್ನು ಚಾಮರಾಜಪೇಟೆಯ ಟಿಆರ್​ಮೀಲ್​​ ಚಿತಾಗಾರಕ್ಕೆ ತರಲಾಗುತ್ತದೆ. ಇಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ದ್ವಾರಕೀಶ್
ಬಂಗಲೆ ಶಾಮ ರಾವ್ ದ್ವಾರಕನಾಥ್, ದ್ವಾರಕೀಶ್ ಆಗಿದ್ದು ಹೇಗೆ?

ದ್ವಾರಕೀಶ್ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com