ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.
ದ್ವಾರಕೀಶ್
ದ್ವಾರಕೀಶ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆಂದು ಮೂಲಗಳು ತಿಳಿಸಿವೆ.

ದ್ವಾರಕೀಶ್
ಕನ್ನಡದ ಪ್ರಸಿದ್ಧ ನಟ ದ್ವಾರಕೀಶ್ ಸೇರಿದಂತೆ ಮೂವರಿಗೆ ಗೌರವ ಡೌಕ್ಟರೇಟ್

1942, ಆಗಸ್ಟ್ 19 ರಂದು ಹುಣಸೂರು ನಲ್ಲಿ ಶಮಾರಾವ್ ಮತ್ತು ಜಯಮ್ಮರವರಿಗೆ ಜನಿಸಿದ ದ್ವಾರಕೀಶ್ ಅವರು, ನಟ, ನಿರ್ದೇಶಕ ಮತ್ತು ನಿರ್ಮಾಪಕ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರಾಗಿದ್ದರು.

ಮೈಸೂರಿನ ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು, ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು. 1963ರಲ್ಲಿ ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು.

ದ್ವಾರಕೀಶ್
ನಟ, ನಿರ್ಮಾಪಕ ದ್ವಾರಕೀಶ್ ಪತ್ನಿ ಅಂಬುಜಾ ದ್ವಾರಕೀಶ್ ನಿಧನ

ನಟ ದ್ವಾರಕೀಶ್‌ ಅವರು ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಹೆಸರು ಮಾಡಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್‌ ನೀಡಿದೆ.

ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ಅವರು ಕನ್ನಡ ಚಿತ್ರರಂಗಕ್ಕೆ ಕಲಾಸೇವೆ ಸಲ್ಲಿಸಿದ್ದಾರೆ. ಡಾ. ವಿಷ್ಣುವರ್ಧನ್‌, ಡಾ. ರಾಜ್‌ಕುಮಾರ್‌ ಹಾಗೂ ಅಂಬರೀಶ್‌ರಂತಹ ಮೇರು ನಟರೊಂದಿಗೆ ಹಿರಿಯ ತೆರೆಯಲ್ಲಿ ಮಿಂಚಿರುವ ನಟ ದ್ವಾರಕೀಶ್‌ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಅವರು ಕನ್ನಡ ಜನತೆಗೆ ಪ್ರಚಂಡಕುಳ್ಳ ಎಂದೇ ಜನಪ್ರಿಯರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com