ವಿಚ್ಛೇದನ ಪ್ರಕರಣ: ಧನುಷ್– ಐಶ್ವರ್ಯಾ ರಜನಿಕಾಂತ್‌ಗೆ ಕೋರ್ಟ್ ನೋಟಿಸ್

ನಟ ಧನುಷ್ ಹಾಗೂ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅಕ್ಟೋಬರ್ 7ರಂದು ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ.
ಧನುಷ್ – ಐಶ್ವರ್ಯಾ
ಧನುಷ್ – ಐಶ್ವರ್ಯಾ

ಚೆನ್ನೈ: ನಟ ಧನುಷ್ ಹಾಗೂ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅಕ್ಟೋಬರ್ 7ರಂದು ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ. ಈ ಸಂಬಂಧ ನೋಟಿಸ್ ನೀಡಿರುವುದಾಗಿ ವರದಿಯಾಗಿದೆ.

ಜನವರಿ 2022 ರಂದು ತಾವಿಬ್ಬರೂ ದೂರ ಆಗುತ್ತಿರುವ ವಿಷಯವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು ಐಶ್ವರ್ಯ ರಜನಿಕಾಂತ್ ಆ ನಂತರ ಅದನ್ನು ನಟ ಧನುಷ್ ಕೂಡ ಖಚಿತ ಪಡಿಸಿದ್ದರು. ಅದಾದ ನಂತರ ಇಬ್ಬರನ್ನೂ ಒಟ್ಟಾಗಿಸುವ ಪ್ರಯತ್ನ ನಡೆಯಿತು. ಸ್ವತಃ ರಜನಿಕಾಂತ್ ಅವರೇ ಇಬ್ಬರೊಂದಿಗೂ ಮಾತನಾಡಿದ್ದರು. ಆದರೆ, ಪ್ರಯತ್ನ ವಿಫಲವಾಗಿತ್ತು.

ಧನುಷ್ – ಐಶ್ವರ್ಯಾ
ರಜನಿ ಮಾತು ನಡೆಯಲಿಲ್ಲ: ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಧನುಷ್- ಐಶ್ವರ್ಯ ದಂಪತಿ

ಜನವರಿ 2022ರಲ್ಲೇ ಘೋಷಿಸಿದ್ದು ಈಗ ಕೋರ್ಟ್ ಮೆಟ್ಟಿಲು ಏರಿದೆ. ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದಾರೆ ಎಂದು ಆಪ್ತರು ಖಚಿತ ಪಡಿಸಿದ್ದರು ಎಂದು ಆಂಗ್ಲ ವೆಬ್ ಸೈಟ್ ವೊಂದು ವರದಿ ಮಾಡಿತ್ತು. ಪರಸ್ಪರ ಒಪ್ಪಿಗೆಯಿಂದ ಸೆಕ್ಷನ್ 13 ಬಿ ಅಡಿಯಲ್ಲಿ ಅವರು ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಪ್ರೀತಿಸಿ ಮದುವೆಯಾದ ಈ ಜೋಡಿಗೆ 18 ವರ್ಷಗಳ ನೆನಪುಗಳಿವೆ. ಲಿಂಗ ಮತ್ತು ಯಾತ್ರಾ ಹೆಸರಿನ ಇಬ್ಬರು ಪುತ್ರರೂ ಇದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com