ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಹರಕೆ ಅರ್ಪಣೆ

ನಟ ಯಶ್ ಮತ್ತು ನಟಿ ರಾಧಿಕಾ ಅವರು ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ‌ ನೀಡಿ ಹರಕೆ ತೀರಿಸಿದರು.
Actor Yash and Family visits Dharmasthala
ಧರ್ಮಸ್ಥಳದಲ್ಲಿ ನಟ ಯಶ್ ಕುಟುಂಬ
Updated on

ಬೆಳ್ತಂಗಡಿ: ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಅವರು ಕುಟುಂಬ ಸಮೇತರಾಗಿ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ನಟ ಯಶ್ ಮತ್ತು ನಟಿ ರಾಧಿಕಾ ಅವರು ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ‌ ನೀಡಿ ಹರಕೆ ತೀರಿಸಿದರು. ಸಿನೆಮಾದ ಸಕ್ಸಸ್ ಗಾಗಿ ಭೇಟಿ ನೀಡಿದ್ದ ಅವರು ಪತ್ನಿ ರಾಧಿಕಾ ಪಂಡಿತ್, ಮಕ್ಕಳೊಂದಿಗೆ ಬಂದು ದೇವರಿಗೆ ಕುಟುಂಬ ಹಾಗೂ ಸಿನೆಮಾ ರೀಲ್ ನ ಮಣ್ಣಿನ ಹರಕೆ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ದೇವಸ್ಥಾನದ ಆನುವಂಶಿಕ ಆಡಳಿತ ಮುಖ್ಯಸ್ಥರಾದ ಡಾ.ಸತೀಶ್ಚಂದ್ರ ಅವರು ದಂಪತಿಗಳನ್ನು ಕ್ಷೇತ್ರದ ವತಿಯಿಂದ ಗೌರವಿಸಿದರು. ಯಶ್ ಜೊತೆ ಪತ್ನಿ ರಾಧಿಕಾ ಪಂಡಿತ್. ಮಕ್ಕಳಾದ ಐರಾ ಹಾಗೂ ಯಥರ್ವ್ ಇದ್ದರು. ಟಾಕ್ಸಿಕ್ ಚಲನಚಿತ್ರದ ನಿರ್ಮಾಪಕ ವೆಂಕಟ್ ಜೊತೆಗಿದ್ದರು.

Actor Yash and Family visits Dharmasthala
ಆಗಸ್ಟ್ ನಲ್ಲಿ ಯಶ್ ನಟನೆಯ Toxic ಸಿನಿಮಾ ಶೂಟಿಂಗ್ ಆರಂಭ: ಬೆಂಗಳೂರಿನಲ್ಲಿ ಸೆಟ್ ನಿರ್ಮಾಣ!

ಬಳಿಕ ದಂಪತಿಗಳು ನೇರವಾಗಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆಯಲು ತೆರಳಿದ್ದು, ಅಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲಿಂದ ನೇರವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com